ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು ತಂಪೆರೆದಿದೆ.
ಕೊಡಗು, ಚಿಕ್ಕಮಗಳೂರು ಸೇರಿ ಬೆಳಗಾವಿಯಲ್ಲಿಯೂ ಉತ್ತಮ ಮಳೆಯಾಗಿದ್ದು, ಏಕಾಏಕಿ ಸುರಿದ ಮಳೆಯಿಂದ ವಾಹನ ಸವಾರರು ಪರದಾಟ ನಡೆಸಿರುವ ಪ್ರಸಂಗವೂ ನಡೆದಿದೆ.
ಕೊಡಗಿನಲ್ಲಿ ಸಂಜೆ ವೇಳೆಗೆ ಹಲವೆಡೆ ಧಾರಾಕಾರ ಮಳೆಯಾಗಿದ್ದು, ಸಂಚಾರ ಅಸ್ತವ್ಯಸ್ತವಾಗಿತ್ತು. ಆದರೂ ಜನ ಖುಷಿಯಿಂದಲೆ ಮಳೆಯೊಂದಿಗೆ ಹೆಚ್ಚೆ ಹಾಕಿ ಮನೆ ಸೇರಿದರು. ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಭಾರಿ ಗಾಳಿಯೊಂದಿಗೆ ಉತ್ತಮ ಮಳೆಯಾಗಿದ್ದು, ಕೆಲ ಪ್ರದೇಶಗಳಲ್ಲಿ ಆಲಿಕಲ್ಲು ಮಳೆ ಕೂಡ ಸುರಿದಿದೆ. ಚಿಕ್ಕಮಗಳೂರು ತಾಲೂಕಿನ ಮುತ್ತೋಡಿ ಮತ್ತು ಕಡಬಗೆರೆ ಭಾಗದಲ್ಲಿ ಭಾರೀ ಮಳೆಯಾಗಿದ್ದರೆ, ಮೂಡಿಗೆರೆಯಲ್ಲಿ ಆಲಿಕಲ್ಲು ಮಳೆಯಾಗಿದೆ. ಬೆಳಗಾವಿಯಲ್ಲಿ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಮಳೆಯಾಗಿದೆ.
ಹೀಗಿದೆ ನಾಳಿನ ಹವಾಮಾನ..
ರಾಜ್ಯದ 4-5 ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಳೆಯೂ ಗಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮೈಸೂರು, ಕೊಡಗು, ಬಳ್ಳಾರಿ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆಯನ್ನು ಅಂದಾಜಿಸಲಾಗಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…