ಕೊಡಗು

ಮಡಿಕೇರಿ ದಸರಾಗೆ ವರ್ಣರಂಜಿತ ತೆರೆ..!

ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾಗೆ ವರ್ಣರಂಜಿತ ತೆರೆಬಿದ್ದಿದೆ. ಹಗಲು ಮೈಸೂರು ದಸರಾದ ವೈಭವ ನೋಡು, ರಾತ್ರಿ ಮಂಜಿನ ನಗರಿ ಮಡಿಕೇರಿ ದಸರಾದ ಸೊಬಗು ನೋಡು ಎಂಬ ಮಾತಿನಂತೆ ಸಹಸ್ರಾರು ಮಂದಿ ಮಡಿಕೇರಿ ದಸರಾ ಸೊಬಗನ್ನು ಬುಧವಾರ ರಾತ್ರಿ ಕಣ್ತುಂಬಿಕೊಂಡರು.

ರಾತ್ರಿಯಿಡೀ ನಡೆದ ಮೈನವಿರೇಳಿಸುವ ಮಂಟಪಗಳ ಶೋಭಾಯಾತ್ರೆ ಜನರ ಮನಸೂರೆಗೊಂಡಿತು. ಧ್ವನಿ ಬೆಳಕಿನ ಸಂಯೋಜನೆಯೊಂದಿಗೆ ನಡೆದ ಅಬ್ಬರದ ಸ್ತಬ್ಧ ಚಿತ್ರ ಪ್ರದರ್ಶನ ಜನರನ್ನು ದೇವಲೋಕಕ್ಕೆ ಕರೆದೊಯ್ಯಿತು. ದುಷ್ಟ ಸಂಹಾರದ ಸಂಕೇತ ನವರಾತ್ರಿಯ ಅಂಗವಾಗಿ ನಡೆದ ಮಂಟಪ ಪ್ರದರ್ಶನ ದೇವಾನುದೇವತೆಗಳ ಪವಾಡಕ್ಕೆ ಸಾಕ್ಷಿಯಾದರೆ, ಸಹಸ್ರಾರು ಭಕ್ತರು ಭಾವಪರವಶತೆಯಲ್ಲಿ ಮಿಂದೆದ್ದರು.

ಮಂಜಿನ ನಗರಿ ಮಡಿಕೇರಿ ದಸರಾದ ಪ್ರಮುಖ ಆಕರ್ಷಣೆಯಾದ ಮಂಟಪ ಶೋಭಾಯಾತ್ರೆ ಮೈನವಿರೇಳಿಸುವಂತಿತ್ತು. ದೇವಾನು ದೇವತೆಗಳ ಲೀಲೆಗಳನ್ನು ಬಿಂಬಿಸುವ ಕಥಾ ಪ್ರಸಂಗಗಳ ಸಂಯೋಜನೆ ಎಲ್ಲರ ಗಮನಸೆಳೆಯಿತು. ಎದೆನಡುಗಿಸುವ ಶಬ್ಧ, ಅದಕ್ಕೆ ತಕ್ಕಂತೆ ಬೆಳಕು. ಇವೆಲ್ಲವುಗಳಿಗೆ ಪೂರಕವಾಗಿ ನರ್ತಿಸುವ ಕಲಾಕೃತಿಗಳು ನೆರೆದಿದ್ದ ಜನರನ್ನು ಒಮ್ಮೆ ದೇವಲೋಕಕ್ಕೆ ಸಂಚಾರ ಮಾಡಿಸಿದಂತಿತ್ತು.

ರಾತ್ರಿ ೧೦ ಗಂಟೆಗೆ ಆರಂಭವಾದ ದಶಮಂಟಪಗಳ ಉತ್ಸವ ಬೆಳಗ್ಗೆ ೫ ಗಂಟೆಯವರೆಗೂ ನಡೆಯಿತು. ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ಸಹಸ್ರಾರು ಪ್ರವಾಸಿಗರು ಮೆರವಣಿಗೆ ನೋಡಲು ಮುಗಿಬಿದ್ದಿದ್ದರು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು. ರಾತ್ರಿಯಿಡೀ ಮಂಜಿನ ನಗರಿಯ ಪ್ರಮುಖ ರಸ್ತೆಗಳಲ್ಲಿ ಜನಪ್ರವಾಹವೇ ಹರಿಯುತ್ತಿತ್ತು. ದೇವಾನುದೇವತೆಗಳ ಶಕ್ತಿ ಲೀಲೆಗಳನ್ನು ಕಣ್ತುಂಬಿಕೊಂಡ ಜನತೆ ಖುಷಿಯ ಅಲೆಯಲ್ಲಿ ತೇಲಿದರು.

ದಸರಾ ಉತ್ಸವದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿತ್ತು. ಅಲ್ಲಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಕೆ. ರಾಮರಾಜನ್ ಮತ್ತು ಹೆಚ್ಚು ವರಿ ಪೊಲೀಸ್ ವರಿಷ್ಠಾಕಾರಿ ಸುಂದರ್ ರಾಜ್ ಮಾರ್ಗದರ್ಶನದಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.

ಒಟ್ಟಿನಲ್ಲಿ ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವ ಈ ಬಾರಿಯೂ ಲಕ್ಷಾಂತರ ಮಂದಿಯನ್ನಾಕರ್ಷಿಸುವಲ್ಲಿ ಯಶಸ್ವಿಯಾಗಿದೆ. ದಸರೆಗೆ ೨ ದಿನಗಳ ಮುನ್ನವೇ ಸಾಗರೋಪಾದಿಯಲ್ಲಿ ಮಡಿಕೇರಿಗೆ ಆಗಮಿಸಿದ ಪ್ರವಾಸಿಗರು ಸ್ಥಳೀಯರೊಡಗೂಡಿ ಜನೋತ್ಸವದ ವೈಭವವನ್ನು ಕಣ್ತುಂಬಿಕೊಂಡರು.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago