ಕೊಡಗು

ಮಡಿಕೇರಿ ದಸರಾಗೆ ವರ್ಣರಂಜಿತ ತೆರೆ..!

ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾಗೆ ವರ್ಣರಂಜಿತ ತೆರೆಬಿದ್ದಿದೆ. ಹಗಲು ಮೈಸೂರು ದಸರಾದ ವೈಭವ ನೋಡು, ರಾತ್ರಿ ಮಂಜಿನ ನಗರಿ ಮಡಿಕೇರಿ ದಸರಾದ ಸೊಬಗು ನೋಡು ಎಂಬ ಮಾತಿನಂತೆ ಸಹಸ್ರಾರು ಮಂದಿ ಮಡಿಕೇರಿ ದಸರಾ ಸೊಬಗನ್ನು ಬುಧವಾರ ರಾತ್ರಿ ಕಣ್ತುಂಬಿಕೊಂಡರು.

ರಾತ್ರಿಯಿಡೀ ನಡೆದ ಮೈನವಿರೇಳಿಸುವ ಮಂಟಪಗಳ ಶೋಭಾಯಾತ್ರೆ ಜನರ ಮನಸೂರೆಗೊಂಡಿತು. ಧ್ವನಿ ಬೆಳಕಿನ ಸಂಯೋಜನೆಯೊಂದಿಗೆ ನಡೆದ ಅಬ್ಬರದ ಸ್ತಬ್ಧ ಚಿತ್ರ ಪ್ರದರ್ಶನ ಜನರನ್ನು ದೇವಲೋಕಕ್ಕೆ ಕರೆದೊಯ್ಯಿತು. ದುಷ್ಟ ಸಂಹಾರದ ಸಂಕೇತ ನವರಾತ್ರಿಯ ಅಂಗವಾಗಿ ನಡೆದ ಮಂಟಪ ಪ್ರದರ್ಶನ ದೇವಾನುದೇವತೆಗಳ ಪವಾಡಕ್ಕೆ ಸಾಕ್ಷಿಯಾದರೆ, ಸಹಸ್ರಾರು ಭಕ್ತರು ಭಾವಪರವಶತೆಯಲ್ಲಿ ಮಿಂದೆದ್ದರು.

ಮಂಜಿನ ನಗರಿ ಮಡಿಕೇರಿ ದಸರಾದ ಪ್ರಮುಖ ಆಕರ್ಷಣೆಯಾದ ಮಂಟಪ ಶೋಭಾಯಾತ್ರೆ ಮೈನವಿರೇಳಿಸುವಂತಿತ್ತು. ದೇವಾನು ದೇವತೆಗಳ ಲೀಲೆಗಳನ್ನು ಬಿಂಬಿಸುವ ಕಥಾ ಪ್ರಸಂಗಗಳ ಸಂಯೋಜನೆ ಎಲ್ಲರ ಗಮನಸೆಳೆಯಿತು. ಎದೆನಡುಗಿಸುವ ಶಬ್ಧ, ಅದಕ್ಕೆ ತಕ್ಕಂತೆ ಬೆಳಕು. ಇವೆಲ್ಲವುಗಳಿಗೆ ಪೂರಕವಾಗಿ ನರ್ತಿಸುವ ಕಲಾಕೃತಿಗಳು ನೆರೆದಿದ್ದ ಜನರನ್ನು ಒಮ್ಮೆ ದೇವಲೋಕಕ್ಕೆ ಸಂಚಾರ ಮಾಡಿಸಿದಂತಿತ್ತು.

ರಾತ್ರಿ ೧೦ ಗಂಟೆಗೆ ಆರಂಭವಾದ ದಶಮಂಟಪಗಳ ಉತ್ಸವ ಬೆಳಗ್ಗೆ ೫ ಗಂಟೆಯವರೆಗೂ ನಡೆಯಿತು. ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ಸಹಸ್ರಾರು ಪ್ರವಾಸಿಗರು ಮೆರವಣಿಗೆ ನೋಡಲು ಮುಗಿಬಿದ್ದಿದ್ದರು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು. ರಾತ್ರಿಯಿಡೀ ಮಂಜಿನ ನಗರಿಯ ಪ್ರಮುಖ ರಸ್ತೆಗಳಲ್ಲಿ ಜನಪ್ರವಾಹವೇ ಹರಿಯುತ್ತಿತ್ತು. ದೇವಾನುದೇವತೆಗಳ ಶಕ್ತಿ ಲೀಲೆಗಳನ್ನು ಕಣ್ತುಂಬಿಕೊಂಡ ಜನತೆ ಖುಷಿಯ ಅಲೆಯಲ್ಲಿ ತೇಲಿದರು.

ದಸರಾ ಉತ್ಸವದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿತ್ತು. ಅಲ್ಲಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಕೆ. ರಾಮರಾಜನ್ ಮತ್ತು ಹೆಚ್ಚು ವರಿ ಪೊಲೀಸ್ ವರಿಷ್ಠಾಕಾರಿ ಸುಂದರ್ ರಾಜ್ ಮಾರ್ಗದರ್ಶನದಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.

ಒಟ್ಟಿನಲ್ಲಿ ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವ ಈ ಬಾರಿಯೂ ಲಕ್ಷಾಂತರ ಮಂದಿಯನ್ನಾಕರ್ಷಿಸುವಲ್ಲಿ ಯಶಸ್ವಿಯಾಗಿದೆ. ದಸರೆಗೆ ೨ ದಿನಗಳ ಮುನ್ನವೇ ಸಾಗರೋಪಾದಿಯಲ್ಲಿ ಮಡಿಕೇರಿಗೆ ಆಗಮಿಸಿದ ಪ್ರವಾಸಿಗರು ಸ್ಥಳೀಯರೊಡಗೂಡಿ ಜನೋತ್ಸವದ ವೈಭವವನ್ನು ಕಣ್ತುಂಬಿಕೊಂಡರು.

andolanait

Recent Posts

ಪುಲ್ವಾಮಾ ದಾಳಿ 7 ವರ್ಷ : ಹುತಾತ್ಮರಿಗೆ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ನಮನ

ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್‌ ಸಿಬ್ಬಂದಿಗೆ…

15 mins ago

ಎಮರ್ಜೆನ್ಸಿ ಲ್ಯಾಂಡಿಂಗ್‌ ಉದ್ಘಾಟಿಸಿದ ಪ್ರಧಾನಿ ಮೋದಿ

ಮೋರನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೋರಂನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ…

38 mins ago

ಸಚ್ಚಿದಾನದ ಶ್ರೀಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಯಜ್ಞ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…

2 hours ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌಲಭ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…

2 hours ago

ಭಾರತ – ಅಮೆರಿಕ ವ್ಯಾಪಾರ ಒಪ್ಪಂದ : ಹಿನ್ನೆಲೆ ಮತ್ತು ಪರಿಣಾಮ

• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…

3 hours ago

ಓದುಗರ ಪತ್ರ | ಯಡತೊರೆಯಲ್ಲಿ ಬಸ್ ತಂಗುದಾಣ ನಿರ್ಮಿಸಿ

ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…

3 hours ago