ಕೊಡಗು

ಮಡಿಕೇರಿ ದಸರಾಗೆ ವರ್ಣರಂಜಿತ ತೆರೆ..!

ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾಗೆ ವರ್ಣರಂಜಿತ ತೆರೆಬಿದ್ದಿದೆ. ಹಗಲು ಮೈಸೂರು ದಸರಾದ ವೈಭವ ನೋಡು, ರಾತ್ರಿ ಮಂಜಿನ ನಗರಿ ಮಡಿಕೇರಿ ದಸರಾದ ಸೊಬಗು ನೋಡು ಎಂಬ ಮಾತಿನಂತೆ ಸಹಸ್ರಾರು ಮಂದಿ ಮಡಿಕೇರಿ ದಸರಾ ಸೊಬಗನ್ನು ಬುಧವಾರ ರಾತ್ರಿ ಕಣ್ತುಂಬಿಕೊಂಡರು.

ರಾತ್ರಿಯಿಡೀ ನಡೆದ ಮೈನವಿರೇಳಿಸುವ ಮಂಟಪಗಳ ಶೋಭಾಯಾತ್ರೆ ಜನರ ಮನಸೂರೆಗೊಂಡಿತು. ಧ್ವನಿ ಬೆಳಕಿನ ಸಂಯೋಜನೆಯೊಂದಿಗೆ ನಡೆದ ಅಬ್ಬರದ ಸ್ತಬ್ಧ ಚಿತ್ರ ಪ್ರದರ್ಶನ ಜನರನ್ನು ದೇವಲೋಕಕ್ಕೆ ಕರೆದೊಯ್ಯಿತು. ದುಷ್ಟ ಸಂಹಾರದ ಸಂಕೇತ ನವರಾತ್ರಿಯ ಅಂಗವಾಗಿ ನಡೆದ ಮಂಟಪ ಪ್ರದರ್ಶನ ದೇವಾನುದೇವತೆಗಳ ಪವಾಡಕ್ಕೆ ಸಾಕ್ಷಿಯಾದರೆ, ಸಹಸ್ರಾರು ಭಕ್ತರು ಭಾವಪರವಶತೆಯಲ್ಲಿ ಮಿಂದೆದ್ದರು.

ಮಂಜಿನ ನಗರಿ ಮಡಿಕೇರಿ ದಸರಾದ ಪ್ರಮುಖ ಆಕರ್ಷಣೆಯಾದ ಮಂಟಪ ಶೋಭಾಯಾತ್ರೆ ಮೈನವಿರೇಳಿಸುವಂತಿತ್ತು. ದೇವಾನು ದೇವತೆಗಳ ಲೀಲೆಗಳನ್ನು ಬಿಂಬಿಸುವ ಕಥಾ ಪ್ರಸಂಗಗಳ ಸಂಯೋಜನೆ ಎಲ್ಲರ ಗಮನಸೆಳೆಯಿತು. ಎದೆನಡುಗಿಸುವ ಶಬ್ಧ, ಅದಕ್ಕೆ ತಕ್ಕಂತೆ ಬೆಳಕು. ಇವೆಲ್ಲವುಗಳಿಗೆ ಪೂರಕವಾಗಿ ನರ್ತಿಸುವ ಕಲಾಕೃತಿಗಳು ನೆರೆದಿದ್ದ ಜನರನ್ನು ಒಮ್ಮೆ ದೇವಲೋಕಕ್ಕೆ ಸಂಚಾರ ಮಾಡಿಸಿದಂತಿತ್ತು.

ರಾತ್ರಿ ೧೦ ಗಂಟೆಗೆ ಆರಂಭವಾದ ದಶಮಂಟಪಗಳ ಉತ್ಸವ ಬೆಳಗ್ಗೆ ೫ ಗಂಟೆಯವರೆಗೂ ನಡೆಯಿತು. ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ಸಹಸ್ರಾರು ಪ್ರವಾಸಿಗರು ಮೆರವಣಿಗೆ ನೋಡಲು ಮುಗಿಬಿದ್ದಿದ್ದರು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು. ರಾತ್ರಿಯಿಡೀ ಮಂಜಿನ ನಗರಿಯ ಪ್ರಮುಖ ರಸ್ತೆಗಳಲ್ಲಿ ಜನಪ್ರವಾಹವೇ ಹರಿಯುತ್ತಿತ್ತು. ದೇವಾನುದೇವತೆಗಳ ಶಕ್ತಿ ಲೀಲೆಗಳನ್ನು ಕಣ್ತುಂಬಿಕೊಂಡ ಜನತೆ ಖುಷಿಯ ಅಲೆಯಲ್ಲಿ ತೇಲಿದರು.

ದಸರಾ ಉತ್ಸವದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿತ್ತು. ಅಲ್ಲಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಕೆ. ರಾಮರಾಜನ್ ಮತ್ತು ಹೆಚ್ಚು ವರಿ ಪೊಲೀಸ್ ವರಿಷ್ಠಾಕಾರಿ ಸುಂದರ್ ರಾಜ್ ಮಾರ್ಗದರ್ಶನದಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.

ಒಟ್ಟಿನಲ್ಲಿ ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವ ಈ ಬಾರಿಯೂ ಲಕ್ಷಾಂತರ ಮಂದಿಯನ್ನಾಕರ್ಷಿಸುವಲ್ಲಿ ಯಶಸ್ವಿಯಾಗಿದೆ. ದಸರೆಗೆ ೨ ದಿನಗಳ ಮುನ್ನವೇ ಸಾಗರೋಪಾದಿಯಲ್ಲಿ ಮಡಿಕೇರಿಗೆ ಆಗಮಿಸಿದ ಪ್ರವಾಸಿಗರು ಸ್ಥಳೀಯರೊಡಗೂಡಿ ಜನೋತ್ಸವದ ವೈಭವವನ್ನು ಕಣ್ತುಂಬಿಕೊಂಡರು.

andolanait

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

11 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

11 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

12 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

13 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

13 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

14 hours ago