ಕೊಡಗು

ಮಡಿಕೇರಿ ದಸರಾಗೆ ವರ್ಣರಂಜಿತ ತೆರೆ..!

ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾಗೆ ವರ್ಣರಂಜಿತ ತೆರೆಬಿದ್ದಿದೆ. ಹಗಲು ಮೈಸೂರು ದಸರಾದ ವೈಭವ ನೋಡು, ರಾತ್ರಿ ಮಂಜಿನ ನಗರಿ ಮಡಿಕೇರಿ ದಸರಾದ ಸೊಬಗು ನೋಡು ಎಂಬ ಮಾತಿನಂತೆ ಸಹಸ್ರಾರು ಮಂದಿ ಮಡಿಕೇರಿ ದಸರಾ ಸೊಬಗನ್ನು ಬುಧವಾರ ರಾತ್ರಿ ಕಣ್ತುಂಬಿಕೊಂಡರು.

ರಾತ್ರಿಯಿಡೀ ನಡೆದ ಮೈನವಿರೇಳಿಸುವ ಮಂಟಪಗಳ ಶೋಭಾಯಾತ್ರೆ ಜನರ ಮನಸೂರೆಗೊಂಡಿತು. ಧ್ವನಿ ಬೆಳಕಿನ ಸಂಯೋಜನೆಯೊಂದಿಗೆ ನಡೆದ ಅಬ್ಬರದ ಸ್ತಬ್ಧ ಚಿತ್ರ ಪ್ರದರ್ಶನ ಜನರನ್ನು ದೇವಲೋಕಕ್ಕೆ ಕರೆದೊಯ್ಯಿತು. ದುಷ್ಟ ಸಂಹಾರದ ಸಂಕೇತ ನವರಾತ್ರಿಯ ಅಂಗವಾಗಿ ನಡೆದ ಮಂಟಪ ಪ್ರದರ್ಶನ ದೇವಾನುದೇವತೆಗಳ ಪವಾಡಕ್ಕೆ ಸಾಕ್ಷಿಯಾದರೆ, ಸಹಸ್ರಾರು ಭಕ್ತರು ಭಾವಪರವಶತೆಯಲ್ಲಿ ಮಿಂದೆದ್ದರು.

ಮಂಜಿನ ನಗರಿ ಮಡಿಕೇರಿ ದಸರಾದ ಪ್ರಮುಖ ಆಕರ್ಷಣೆಯಾದ ಮಂಟಪ ಶೋಭಾಯಾತ್ರೆ ಮೈನವಿರೇಳಿಸುವಂತಿತ್ತು. ದೇವಾನು ದೇವತೆಗಳ ಲೀಲೆಗಳನ್ನು ಬಿಂಬಿಸುವ ಕಥಾ ಪ್ರಸಂಗಗಳ ಸಂಯೋಜನೆ ಎಲ್ಲರ ಗಮನಸೆಳೆಯಿತು. ಎದೆನಡುಗಿಸುವ ಶಬ್ಧ, ಅದಕ್ಕೆ ತಕ್ಕಂತೆ ಬೆಳಕು. ಇವೆಲ್ಲವುಗಳಿಗೆ ಪೂರಕವಾಗಿ ನರ್ತಿಸುವ ಕಲಾಕೃತಿಗಳು ನೆರೆದಿದ್ದ ಜನರನ್ನು ಒಮ್ಮೆ ದೇವಲೋಕಕ್ಕೆ ಸಂಚಾರ ಮಾಡಿಸಿದಂತಿತ್ತು.

ರಾತ್ರಿ ೧೦ ಗಂಟೆಗೆ ಆರಂಭವಾದ ದಶಮಂಟಪಗಳ ಉತ್ಸವ ಬೆಳಗ್ಗೆ ೫ ಗಂಟೆಯವರೆಗೂ ನಡೆಯಿತು. ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ಸಹಸ್ರಾರು ಪ್ರವಾಸಿಗರು ಮೆರವಣಿಗೆ ನೋಡಲು ಮುಗಿಬಿದ್ದಿದ್ದರು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು. ರಾತ್ರಿಯಿಡೀ ಮಂಜಿನ ನಗರಿಯ ಪ್ರಮುಖ ರಸ್ತೆಗಳಲ್ಲಿ ಜನಪ್ರವಾಹವೇ ಹರಿಯುತ್ತಿತ್ತು. ದೇವಾನುದೇವತೆಗಳ ಶಕ್ತಿ ಲೀಲೆಗಳನ್ನು ಕಣ್ತುಂಬಿಕೊಂಡ ಜನತೆ ಖುಷಿಯ ಅಲೆಯಲ್ಲಿ ತೇಲಿದರು.

ದಸರಾ ಉತ್ಸವದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿತ್ತು. ಅಲ್ಲಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಕೆ. ರಾಮರಾಜನ್ ಮತ್ತು ಹೆಚ್ಚು ವರಿ ಪೊಲೀಸ್ ವರಿಷ್ಠಾಕಾರಿ ಸುಂದರ್ ರಾಜ್ ಮಾರ್ಗದರ್ಶನದಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.

ಒಟ್ಟಿನಲ್ಲಿ ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವ ಈ ಬಾರಿಯೂ ಲಕ್ಷಾಂತರ ಮಂದಿಯನ್ನಾಕರ್ಷಿಸುವಲ್ಲಿ ಯಶಸ್ವಿಯಾಗಿದೆ. ದಸರೆಗೆ ೨ ದಿನಗಳ ಮುನ್ನವೇ ಸಾಗರೋಪಾದಿಯಲ್ಲಿ ಮಡಿಕೇರಿಗೆ ಆಗಮಿಸಿದ ಪ್ರವಾಸಿಗರು ಸ್ಥಳೀಯರೊಡಗೂಡಿ ಜನೋತ್ಸವದ ವೈಭವವನ್ನು ಕಣ್ತುಂಬಿಕೊಂಡರು.

andolanait

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

1 hour ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

1 hour ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

1 hour ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

1 hour ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

1 hour ago