ಮಡಿಕೇರಿ: ಇತ್ತೀಚೆಗೆ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದ ಸೋಮವಾರಪೇಟೆ ತಾಲ್ಲೂಕಿನ ಯಡವನಾಡು ಮೀಸಲು ಅರಣ್ಯದ ಕೂಪಾಡಿ ಹಾಡಿಯ ತಮ್ಮಣ್ಣ ಕುಟುಂಬಕ್ಕೆ ಅರಣ್ಯ ಇಲಾಖೆಯು 15 ಲಕ್ಷ ರೂ ಪರಿಹಾರದ ಚೆಕ್ ನೀಡಿದೆ.
ಮೃತ ತಮ್ಮಣ್ಣ ತಾಯಿ ಬೋಜಿ ಅವರಿಗೆ ಅರಣ್ಯಾಧಿಕಾರಿಗಳು ಚೆಕ್ ವಿತರಿಸಿದರು. ಈ ವೇಳೆ ಪರಿಹಾರ ಹಣವನ್ನು ಉತ್ತಮ ಕಾರ್ಯಕ್ಕೆ ಉಪಯೋಗಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಅರಣ್ಯ ಇಲಾಖೆ ಸಿಬ್ಬಂದಿ, ಈ ಹಾಡಿಯು ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವುದರಿಂದ ಕಾಡಾನೆಗಳ ಬಗ್ಗೆ ಎಚ್ಚರ ವಹಿಸಬೇಕು. ಮೀಸಲು ಅರಣ್ಯದೊಳಗೆ ತಿರುಗಾಡಬಾರದು. ಕಾಡಾನೆ ಕಂಡಾಗ ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.
ಮಾನವರ ಮೇಲೆ ದಾಳಿ ಮಾಡುವ ಕಾಡಾನೆಗಳನ್ನು ಹಿಡಿದು ಪಳಗಿಸಲಾಗುವುದು. ಅಂತಹ ಆನೆಗಳನ್ನು ಕಂಡು ಹಿಡಿದು ಸೆರೆಹಿಡಿಯಲಾಗುವುದು ಎಂದು ಹೇಳಿದರು.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…