ಮಡಿಕೇರಿ: ಇತ್ತೀಚೆಗೆ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದ ಸೋಮವಾರಪೇಟೆ ತಾಲ್ಲೂಕಿನ ಯಡವನಾಡು ಮೀಸಲು ಅರಣ್ಯದ ಕೂಪಾಡಿ ಹಾಡಿಯ ತಮ್ಮಣ್ಣ ಕುಟುಂಬಕ್ಕೆ ಅರಣ್ಯ ಇಲಾಖೆಯು 15 ಲಕ್ಷ ರೂ ಪರಿಹಾರದ ಚೆಕ್ ನೀಡಿದೆ.
ಮೃತ ತಮ್ಮಣ್ಣ ತಾಯಿ ಬೋಜಿ ಅವರಿಗೆ ಅರಣ್ಯಾಧಿಕಾರಿಗಳು ಚೆಕ್ ವಿತರಿಸಿದರು. ಈ ವೇಳೆ ಪರಿಹಾರ ಹಣವನ್ನು ಉತ್ತಮ ಕಾರ್ಯಕ್ಕೆ ಉಪಯೋಗಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಅರಣ್ಯ ಇಲಾಖೆ ಸಿಬ್ಬಂದಿ, ಈ ಹಾಡಿಯು ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವುದರಿಂದ ಕಾಡಾನೆಗಳ ಬಗ್ಗೆ ಎಚ್ಚರ ವಹಿಸಬೇಕು. ಮೀಸಲು ಅರಣ್ಯದೊಳಗೆ ತಿರುಗಾಡಬಾರದು. ಕಾಡಾನೆ ಕಂಡಾಗ ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.
ಮಾನವರ ಮೇಲೆ ದಾಳಿ ಮಾಡುವ ಕಾಡಾನೆಗಳನ್ನು ಹಿಡಿದು ಪಳಗಿಸಲಾಗುವುದು. ಅಂತಹ ಆನೆಗಳನ್ನು ಕಂಡು ಹಿಡಿದು ಸೆರೆಹಿಡಿಯಲಾಗುವುದು ಎಂದು ಹೇಳಿದರು.
ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…
ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…