ವಿರಾಜಪೇಟೆ : ಅಪ್ರಾಪ್ತ ಪುತ್ರನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಹಿನ್ನೆಲೆಯಲ್ಲಿ ಅಪ್ರಾಪ್ತ ಮತ್ತು ವಾಹನದ ಮಾಲೀಕರಾದ ತಂದೆಯ ಮೇಲೂ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿರಾಜಪೇಟೆ ಬಿಟ್ಟಂಗಾಲ ಗ್ರಾಮದ ಅಂಬಟ್ಟಿ ನಿವಾಸಿ ವಾಹನ ಮಾಲೀಕ ಟಿ.ಆರ್. ಪ್ರಭಾಕರ್(೫೩) ಮತ್ತು ವಾಹನ ಚಾಲನೆ ಮಾಡಿದ ಅಪ್ರಾಪ್ತ ಟಿ.ಆರ್. ಪ್ರಭಾಕರ ಪುತ್ರ ಟಿ.ಪಿ. ಅನಲ್(೧೬) ಕಾನೂನು ಕ್ರಮಕ್ಕೆ ಒಳಗಾದವರು.
ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಎನ್.ಜೆ.ಲತಾ ಮತ್ತು ಸಿಬ್ಬಂದಿ ಬಿಟ್ಟಂಗಾಲ ಜಂಕ್ಷನ್ನಲ್ಲಿ ವಾಹನ ತಪಾಸಣೆ ಕೈಗೊಂಡಿದ್ದರು. ಈ ವೇಳೆ ಅಪ್ರಾಪ್ತ ಸಿಕ್ಕಿಬಿದ್ದಿದಾನೆ.
ವಾಹನ ದಾಖಲೆಗಳು ಆತನ ತಂದೆಯ ಹೆಸರಿನಲ್ಲಿದ್ದು, ಅಪ್ರಾಪ್ತ ಎಂದು ತಿಳಿದಿದ್ದರೂ ವಾಹನ ಚಾಲನೆಗೆ ನೀಡಿರುವುದು ಕಾನೂನು ಬಾಹಿರವಾಗಿರುವ ಹಿನ್ನೆಲೆಯಲ್ಲಿ ಹೊಂಡ ಆಕ್ಟೀವಾ ಸ್ಕೂಟರ್ ಅನ್ನು ವಶಕ್ಕೆ ಪಡೆದು ಮಾಲೀಕರಿಗೆ ಹಾಗೂ ಸವಾರನ ವಿರುದ್ಧ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…