Categories: ಕೊಡಗು

ಮಳೆಹಾನಿ ಕಾಮಗಾರಿ 3 ತಿಂಗಳೊಳಗೆ ಪೂರ್ಣಗೊಳಿಸಿ: ವೆಂಕಟ್ ರಾಜಾ

ಮಡಿಕೇರಿ : ಪ್ರಸಕ್ತ ಮುಂಗಾರು ಅವಧಿಯಲ್ಲಿ ಸುರಿದ ಧಾರಾಕಾರ ಮಳೆಗೆ ರಸ್ತೆ, ಸೇತುವೆ, ಮನೆ ಹಾಗೂ ಸರ್ಕಾರಿ ಕಟ್ಟಡಗಳು ಹಾನಿಯಾಗಿದ್ದು, ಈ ಸಂಬಂಧ ಕಾಮಗಾರಿ ಕೈಗೊಳ್ಳಲು ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಿ ಶೇ.75 ರಷ್ಟು ಹಣ ಬಿಡುಗಡೆ ಮಾಡಲಾಗಿದೆ. ಹೀಗಾಗಿ, 90 ದಿನದೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ  ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯನ್ನು ವಿಡಿಯೋ ಸಂವಾದದ ಮೂಲಕ ಸೋಮವಾರ ನಡೆಸಿ ಜಿಲ್ಲಾಧಿಕಾರಿ ಅವರು ಮಾತನಾಡಿದರು.

ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಇಲಾಖೆ ಮೂಲಕ ಸಲ್ಲಿಸಲಾಗಿದ್ದ ಕ್ರಿಯಾಯೋಜನೆಗೆ ಆಡಳಿತಾತ್ಮಕ ಅನುಮೋದನೆ ದೊರೆದಿತ್ತು, ಹಣ ಬಿಡುಗಡೆ ಮಾಡಲಾಗಿದೆ. ಕೂಡಲೇ ಕಾಮಗಾರಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಮುಖ್ಯಮಂತ್ರಿಗಳು ಆಗಸ್ಟ್, 02 ರಂದು ಪೊನ್ನಂಪೇಟೆ ತಾಲ್ಲೂಕು ಶ್ರೀಮಂಗಲ ಬಳಿ ರಸ್ತೆ ಕುಸಿದಿದ್ದ ಪ್ರದೇಶಕ್ಕೆ ಭೇಟಿ ಹಾಗೂ ವಿರಾಜಪೇಟೆ ತಾಲ್ಲೂಕಿನ ಕೆದಮಳ್ಳೂರು ಗ್ರಾಮದ ಬಳಿ ರಸ್ತೆ ಕುಸಿದು ಹಾನಿ ಆಗಿದ್ದ ಪ್ರದೇಶಕ್ಕೆ ಭೇಟಿ ಸೇರಿದಂತೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಿಸಿದ್ದು, ಈ ಸಂಬಂಧ ಕಾಮಗಾರಿಗಳನ್ನು ಆದ್ಯತೆ ಮೇಲೆ ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ತಹಶೀಲ್ದಾರರು ಕಾಮಗಾರಿಯನ್ನು ಕಾಲ ಕಾಲಕ್ಕೆ ವೀಕ್ಷಿಸಿ ವರದಿ ನೀಡುವಂತೆ ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿನಿರ್ದೇಶನ ನೀಡಿದರು.

ಮೂರನೇ ಪಾರ್ಟಿಯಿಂದಲೂ ಸಹ ಕಾಮಗಾರಿ ಸಂಬಂಧ ಮಾಹಿತಿ ಒದಗಿಸುವಂತೆ ಸಂಬಂಧಪಟ್ಟ ಎಂಜಿನಿಯರ್‍ಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಮನೆ ಹಾನಿ ಸಂಬಂಧಿಸಿದಂತೆ ಕಂದಾಯ ಸಚಿವರ ಆದೇಶದಂತೆ ಕಾಮಗಾರಿ ಕೈಗೊಳ್ಳಬೇಕು. ಪ್ಯಾಕೇಜ್ ವರ್ಕ್ ಸೇರಿದಂತೆ ಎಲ್ಲಾ ಕೆಲಸಗಳನ್ನು ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಹೇಳಿದರು.

ಇದೇ 30 ರಂದು  ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ಕೆಡಿಪಿ ಸಭೆಗೆ ಅಧಿಕಾರಿಗಳು ಎಲ್ಲಾ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳುವಂತೆ  ಹೇಳಿದರು.

ಪಂಚಾಯತ್ ರಾಜ್ ಎಂಜಿನಿಯರ್ ನಾಯಕ್, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಮುತ್ತುರಾಜ್ ಅವರು ಹಲವು ಮಾಹಿತಿ ನೀಡಿದರು. ವಿವಿಧ ಇಲಾಖೆ ಅಧಿಕಾರಿಗಳು ವಿಡಿಯೋ ಸಂವಾದಲ್ಲಿ ಪಾಲ್ಗೊಂಡಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

9 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

9 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

9 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

9 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

9 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

9 hours ago