ಕೊಡಗು : ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾಗೂ ಮಾನವನ ನಡುವಿನ ಸಂಘರ್ಷ ಮುಂದುವರೆದಿದ್ದು,ಆಹಾರ ಅರಸಿ ನಾಡಿಗೆ ಬರುತ್ತಿರುವ ಕಾಡಾನೆಗಳ ದಾಂಧಲೆ ಹೆಚ್ಚಾಗಿದೆ.
ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಪುಲಿಯೇರಿ ಗ್ರಾಮದಲ್ಲಿ ನೆನ್ನೆ ರಾತ್ರಿ ಚೋವಂಡ ವಾಸು ಪೊನ್ನಪ್ಪ ಅವರ ತೊಟದಲ್ಲಿನ ಕಾಫಿ,ಹಾಗೂ ಅಡಿಕೆ ಬೆಳೆಯನ್ನು ಕಾಡಾನೆಗಳು ನಾಶಗೊಳಿಸಿವೆ.
ಕಳೆದ ಒಂದೆರಡು ದಿನಗಳಿಂದ ಆನೆಗಳು ಇದೇ ಭಾಗದಲ್ಲಿ ಬೀಡು ಬಿಟ್ಟಿದ್ದು,ಗಜರಾಜನ ಉಪಟಳಕ್ಕೆ ಕಾರ್ಮಿಕರು ತೊಟಕ್ಕೆ ತೆರಳಲು ಭಯ ಪಡುತ್ತಿದ್ದಾರೆ,ಕಾಡಾನೆಗಳ ಉಪಟಳಿಂದ ಮುಕ್ತಿ ನೀಡುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.





