rain land slide s
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನದ ಬಳಿಕ ಮಳೆ ಚುರುಕುಗೊಂಡಿದ್ದು, ಸಾಧಾರಣ ಮಳೆ ಮುಂದುವರಿದಿದೆ.
ಜಿಲ್ಲೆಯಲ್ಲಿ ಶುಕ್ರವಾರ ಭಾರೀ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಆರೆಂಜ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಗುರುವಾರ ರಾತ್ರಿ ಕೂಡ ಉತ್ತಮ ಮಳೆಯಾಗಿತ್ತು. ಆದರೆ, ಶುಕ್ರವಾರ ಬೆಳಿಗ್ಗೆ ಮಳೆಯ ಪ್ರಮಾಣ ಕಡಿಮೆಯಾಗಿದೆ. ಮಧ್ಯಾಹ್ನದ ಬಳಿಕ ಮಳೆ ಚುರುಕುಗೊಂಡಿದೆ.
ಭಾಗಮಂಡಲ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ನಿಧಾನವಾಗಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಸಂಪಾಜೆ, ವಿರಾಜಪೇಟೆ ವ್ಯಾಪ್ತಿಯಲ್ಲಿಯೂ ಉತ್ತಮ ಮಳೆಯಾಗಿದೆ. ಭಾರೀ ಮಳೆಯಿಂದ ಮಡಿಕೇರಿ-ವಿರಾಜಪೇಟೆ ರಸ್ತೆಯ ಮೇಕೇರಿ ಬಳಿ ರಸ್ತೆಬದಿ ಸಣ್ಣ ಪ್ರಮಾಣದ ಮಣ್ಣು ಕುಸಿಯಲಾರಂಭಿಸಿದ್ದು, ಹೆಚ್ಚಿನ ಮಣ್ಣು ಕುಸಿದಲ್ಲಿ ರಸ್ತೆ ಸಂಪರ್ಕ ಕಡಿತಗೊಳ್ಳುವ ಭೀತಿ ಸೃಷ್ಟಿಯಾಗಿದೆ.
ಕಳೆದ ೨೪ ಗಂಟೆಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಸರಾಸರಿ ೬೪.೮೯ ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ೨೩.೧೩ ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ ೨,೫೩೬.೪೮ ಮಿ.ಮೀ., ಕಳೆದ ವರ್ಷ ಇದೇ ಅವಧಿಯಲ್ಲಿ ೨,೫೪೪.೭೩ ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ೯೧.೩೭ ಮಿ.ಮೀ., ವಿರಾಜಪೇಟೆ ತಾಲ್ಲೂಕಿನಲ್ಲಿ ೯೫.೬೫ ಮಿ.ಮೀ., ಪೊನ್ನಂಪೇಟೆ ತಾಲ್ಲೂಕಿನಲ್ಲಿ ೫೪.೮೭ ಮಿ.ಮೀ., ಸೋಮವಾರಪೇಟೆ ತಾಲ್ಲೂಕಿನಲ್ಲಿ ೪೩.೬೫ ಮಿ.ಮೀ., ಕುಶಾಲನಗರ ತಾಲ್ಲೂಕಿನಲ್ಲಿ ೩೮.೯೦ ಮಿ.ಮೀ. ಮಳೆಯಾಗಿದೆ. ಮಡಿಕೇರಿ ಕಸಬಾ ೬೫, ನಾಪೋಕ್ಲು ೭೬.೨೦, ಸಂಪಾಜೆ ೧೧೫.೫೦, ಭಾಗಮಂಡಲ ೧೦೮.೮೦, ವಿರಾಜಪೇಟೆ ೧೦೩.೮೦, ಅಮ್ಮತ್ತಿ ೮೭.೫೦, ಹುದಿಕೇರಿ ೭೨.೪೦, ಶ್ರೀಮಂಗಲ ೫೯, ಪೊನ್ನಂಪೇಟೆ ೭೫, ಬಾಳೆಲೆ ೧೩.೦೯, ಸೋಮವಾರಪೇಟೆ ೩೪.೨೦, ಶನಿವಾರಸಂತೆ ೩೪, ಶಾಂತಳ್ಳಿ ೭೨, ಕೊಡ್ಲಿಪೇಟೆ ೩೪.೪೦, ಕುಶಾಲನಗರ ೨೮.೬೦, ಸುಂಟಿಕೊಪ್ಪ ೪೯.೨೦ ಮಿ.ಮೀ. ಮಳೆಯಾಗಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…