ಕೊಡಗು

ಕಾಡುಪ್ರಾಣಿಗಳಿಂದ ನಿರಂತರ ಬೆಳೆ ಹಾನಿ : ಅರಣ್ಯಾಧಿಕಾರಿಗಳೊಂದಿಗೆ ಗ್ರಾಮಸ್ಥರ ಸಭೆ

ಕುಶಾಲನಗರ : ಆನೆ ಮತ್ತು ಮಾನವ ಸಂಘರ್ಷ, ಕಾಡು ಪ್ರಾಣಿಗಳ ಉಪಟಳ ನಿಗ್ರಹ ಸಂಬಂಧ ನಂಜರಾಯಪಟ್ಟಣ ಗ್ರಾ.ಪಂ.ವ್ಯಾಪ್ತಿಯ ರೈತರು ಹಾಗೂ ಗ್ರಾಮಸ್ಥರ ಹೋರಾಟ ಸಮಿತಿಯ ಸಭೆ ವಲಯ ಅರಣ್ಯಾಧಿಕಾರಿಗಳ ಸಮ್ಮುಖದಲ್ಲಿ ಗ್ರಾಪಂ ಸಭಾಂಗಣದಲ್ಲಿ ನಡೆಯಿತು.

ಗ್ರಾ.ಪಂ. ವ್ಯಾಪ್ತಿಯಲ್ಲಿ ವನ್ಯಜೀವಿಗಳಿಂದ ಉಂಟಾಗುತ್ತಿರುವ ಅನಾಹುತಗಳು ಮತ್ತು ಬೆಳೆಹಾನಿ ತಡೆಗಟ್ಟಲು ಸೂಕ್ತ ಪರಿಹಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪ್ರಥಮ ಸಭೆಯಲ್ಲಿ ಉಪವಲಯ ಅರಣ್ಯಾಧಿಕಾರಿಗೆ ಮನವಿ ಸಲ್ಲಿಸಲಾಗಿತ್ತು. ಜಿಲ್ಲಾಮಟ್ಟದ ಅಧಿಕಾರಿಗಳ ಕಚೇರಿಗೆ ನಿಯೋಗ ತೆರಳುವ ನಿರ್ಧಾರದ ಹಿನ್ನೆಲೆಯಲ್ಲಿ ವಲಯ ಅರಣ್ಯಾಧಿಕಾರಿ ರಕ್ಷಿತ್ ಗ್ರಾಮಕ್ಕೆ ಭೇಟಿ ನೀಡಿದ್ದರು. ಗ್ರಾ.ಪಂ.ಅಧ್ಯಕ್ಷ ಸಿ.ಎಲ್.ವಿಶ್ವ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರೈತರು ಹಾಗೂ ಬೆಳೆಗಾರರು ಅರಣ್ಯಾಧಿಕಾರಿಗಳಿಗೆ ಸಮಸ್ಯೆಗಳ ಬಗ್ಗೆ ತಿಳಿಸಿದರು.

ನಂಜರಾಯಪಟ್ಟಣ ಗ್ರಾ.ಪಂ. ಅಧ್ಯಕ್ಷ ಸಿ.ಎಲ್.ವಿಶ್ವ ಮಾತನಾಡಿ, ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಹೋರಾಟ ರೂಪಿಸಲು ೧೧ ಮಂದಿ ಒಳಗೊಂಡ ಹೋರಾಟ ಸಮಿತಿಯನ್ನು ರಚಿಸಲಾಗಿದೆ. ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು, ಶಾಸಕರು, ಸಂಸದರು, ರೈತ ಮುಖಂಡರ ಗಮನ ಸೆಳೆದು ಸಮಸ್ಯೆ ಪರಿಹಾರಕ್ಕೆ ಕ್ರಮಕೈಗೊಳ್ಳುವ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದರು.

ಕಾಡಾನೆಗಳ ಹಾವಳಿ ಒಳಗೊಂಡಂತೆ,ಕಾಡು ಹಂದಿ, ಮುಳ್ಳುಹಂದಿ, ನವಿಲು, ಮಂಗ, ಕೆಂಜರಿಗಳ ಹಾವಳಿಯಿಂದ ಅಪಾರ ಪ್ರಮಾಣದಲ್ಲಿ ಬೆಳೆ ನಾಶ ಉಂಟಾಗುತ್ತಿದೆ. ಹುಲಿ ಕಾಟ ಕೂಡ ಹೆಚ್ಚಾಗಿದೆ. ಸೋಲಾರ್ ಫೆನ್ಸಿಂಗ್, ರೈಲ್ವೇ ಬ್ಯಾರಿಕೇಡ್ ಅಳವಡಿಕೆ ಅವೈಜ್ಞಾನಿಕವಾಗಿದ್ದು ಪರಿಣಾಮಕಾರಿಯಾಗಿಲ್ಲ ಎಂದು ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮಸ್ಥರ ಪ್ರಶ್ನೆಗಳು,ಬೇಡಿಕೆಗಳನ್ನು ಆಲಿಸಿದ ಅರಣ್ಯಾಽಕಾರಿ ಸಮಸ್ಯೆ ಇತ್ಯರ್ಥಕ್ಕೆ ಕಾಲವಕಾಶ ನೀಡಬೇಕು.ಶಾಶ್ವತ ಪರಿಹಾರ ಕಷ್ಟಸಾಧ್ಯ, ಕಾನೂನಿನ ಚೌಕಟ್ಟಿನಲ್ಲಿ ವೈಜ್ಞಾನಿಕ ರೀತಿಯಲ್ಲಿ ಸಮಸ್ಯೆಗಳ ಪರಿಹಾರಕ್ಕೆ ಇಲಾಖೆ ಕ್ರಮವಹಿಸಲಿದೆ ಎಂದು ವಲಯ ಅರಣ್ಯಾಧಿಕಾರಿ ರಕ್ಷಿತ್ ತಿಳಿಸಿದರು.

ಮುಂದಿನ ಒಂದು ತಿಂಗಳ ಒಳಗಾಗಿ ನಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ತಪ್ಪಿದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು.

ಸಭೆಯಲ್ಲಿ ಗ್ರಾಪಂ ಸದಸ್ಯ ಕೆ.ವಿ.ಪ್ರೇಮಾನಂದ, ಮಾಜಿ ಸದಸ್ಯ ಸುಮೇಶ್, ಉಪ ವಲಯ ಅರಣ್ಯಾಧಿಕಾರಿಗಳಾದ ಸಚಿನ್ ನಿಂಬಾಳ್ಕರ್, ಡಿ.ಜಿ.ಜಗದೀಶ್, ಹೋರಾಟ ಸಮಿತಿ ಸದಸ್ಯರಾದ ಉಮೇಶ್, ವಿ.ಕೆ.ಸಚಿನ್, ಕೆಮ್ಮಾರನಾ ಲೋಕನಾಥ್, ಐಯಂಡ್ರ ಬಾಲಕೃಷ್ಣ ಇತರರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

15 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

15 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

15 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

15 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

15 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

15 hours ago