ಮಡಿಕೇರಿ: ಇಂದು ಸಂಜೆ ಮೈಸೂರು ದಸರಾಗೆ ತೆರೆ ಬೀಳುತ್ತಿದ್ದಂತೆ ಇತ್ತ ಐತಿಹಾಸಿಕ ಮಡಿಕೇರಿ ದಸರಾದ ದಶಮಂಟಪ ಮೆರವಣಿಗೆ ಶುರುವಾಗಲಿದೆ.
ಈ ಬಾರಿ ಅದ್ಧೂರಿ ದಸರಾ ಆಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ 10 ಪ್ರಮುಖ ದೇವಾಲಯಗಳಿಂದ ಸಿದ್ಧಗೊಳ್ಳುತ್ತಿರುವ ದಶಮಂಟಪಗಳ ಪ್ರದರ್ಶನಕ್ಕಾಗಿ ಸಾವಿರಾರು ಮಂದಿ ಮಡಿಕೇರಿಗೆ ಆಗಮಿಸಿದ್ದಾರೆ.
ಇಂದು ರಾತ್ರಿ 11 ಗಂಟೆ ನಂತರ ಆರಂಭಗೊಳ್ಳುವ ದಶಮಂಟಪಗಳ ಪ್ರದರ್ಶನ ಮುಂಜಾನೆವರೆಗೂ ಸಂಚರಿಸಿ ಎಲ್ಲರಿಗೂ ಪ್ರದರ್ಶನ ನೀಡಲಿವೆ.
ಪೌರಾಣಿಕ ಹಿನ್ನೆಲೆಯ ಕಥೆಯನ್ನು ಪ್ರದರ್ಶಿಸಲು ನಾಲ್ಕು ಶಕ್ತಿದೇವತೆಗಳ ದೇವಾಲಯ ಸಮಿತಿಗಳು ಸೇರಿದಂತೆ 10 ದೇವಾಲಯಗಳು ಕೂಡ ಒಂದೊಂದು ಕಥೆಯನ್ನು ಆಯ್ಕೆಮಾಡಿಕೊಂಡು ಪ್ರದರ್ಶನ ನೀಡಲಿವೆ.
ದಶಮಂಟಪಗಳ ಪ್ರದರ್ಶನ ನೋಡಲೆಂದೇ ರಾಜ್ಯದ ವಿವಿಧೆಡೆಗಳಿಂದ ಲಕ್ಷಾಂತರ ಜನರು ಮಡಿಕೇರಿಗೆ ಆಗಮಿಸಿರುವುದು ವಿಶೇಷವೆನಿಸಿದೆ.
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…