ಕೊಡಗು

ಮಡಿಕೇರಿ ದಸರಾಗೆ ಕ್ಷಣಗಣನೆ: ದಶಮಂಟಪಗಳ ಮೆರವಣಿಗೆಗೆ ಸಜ್ಜು

ಮಡಿಕೇರಿ: ಇಂದು ಸಂಜೆ ಮೈಸೂರು ದಸರಾಗೆ ತೆರೆ ಬೀಳುತ್ತಿದ್ದಂತೆ ಇತ್ತ ಐತಿಹಾಸಿಕ ಮಡಿಕೇರಿ ದಸರಾದ ದಶಮಂಟಪ ಮೆರವಣಿಗೆ ಶುರುವಾಗಲಿದೆ.

ಈ ಬಾರಿ ಅದ್ಧೂರಿ ದಸರಾ ಆಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ  10 ಪ್ರಮುಖ ದೇವಾಲಯಗಳಿಂದ ಸಿದ್ಧಗೊಳ್ಳುತ್ತಿರುವ ದಶಮಂಟಪಗಳ ಪ್ರದರ್ಶನಕ್ಕಾಗಿ ಸಾವಿರಾರು ಮಂದಿ ಮಡಿಕೇರಿಗೆ ಆಗಮಿಸಿದ್ದಾರೆ.

ಇಂದು ರಾತ್ರಿ 11 ಗಂಟೆ ನಂತರ ಆರಂಭಗೊಳ್ಳುವ ದಶಮಂಟಪಗಳ ಪ್ರದರ್ಶನ ಮುಂಜಾನೆವರೆಗೂ ಸಂಚರಿಸಿ ಎಲ್ಲರಿಗೂ ಪ್ರದರ್ಶನ ನೀಡಲಿವೆ.

ಪೌರಾಣಿಕ ಹಿನ್ನೆಲೆಯ ಕಥೆಯನ್ನು ಪ್ರದರ್ಶಿಸಲು ನಾಲ್ಕು ಶಕ್ತಿದೇವತೆಗಳ ದೇವಾಲಯ ಸಮಿತಿಗಳು ಸೇರಿದಂತೆ 10 ದೇವಾಲಯಗಳು ಕೂಡ ಒಂದೊಂದು ಕಥೆಯನ್ನು ಆಯ್ಕೆಮಾಡಿಕೊಂಡು ಪ್ರದರ್ಶನ ನೀಡಲಿವೆ.

ದಶಮಂಟಪಗಳ ಪ್ರದರ್ಶನ ನೋಡಲೆಂದೇ ರಾಜ್ಯದ ವಿವಿಧೆಡೆಗಳಿಂದ ಲಕ್ಷಾಂತರ ಜನರು ಮಡಿಕೇರಿಗೆ ಆಗಮಿಸಿರುವುದು ವಿಶೇಷವೆನಿಸಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

12 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

12 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

12 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

12 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

12 hours ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

12 hours ago