ಕೊಡಗು

ಮಡಿಕೇರಿ ದಸರಾಗೆ ಕ್ಷಣಗಣನೆ: ದಶಮಂಟಪಗಳ ಮೆರವಣಿಗೆಗೆ ಸಜ್ಜು

ಮಡಿಕೇರಿ: ಇಂದು ಸಂಜೆ ಮೈಸೂರು ದಸರಾಗೆ ತೆರೆ ಬೀಳುತ್ತಿದ್ದಂತೆ ಇತ್ತ ಐತಿಹಾಸಿಕ ಮಡಿಕೇರಿ ದಸರಾದ ದಶಮಂಟಪ ಮೆರವಣಿಗೆ ಶುರುವಾಗಲಿದೆ.

ಈ ಬಾರಿ ಅದ್ಧೂರಿ ದಸರಾ ಆಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ  10 ಪ್ರಮುಖ ದೇವಾಲಯಗಳಿಂದ ಸಿದ್ಧಗೊಳ್ಳುತ್ತಿರುವ ದಶಮಂಟಪಗಳ ಪ್ರದರ್ಶನಕ್ಕಾಗಿ ಸಾವಿರಾರು ಮಂದಿ ಮಡಿಕೇರಿಗೆ ಆಗಮಿಸಿದ್ದಾರೆ.

ಇಂದು ರಾತ್ರಿ 11 ಗಂಟೆ ನಂತರ ಆರಂಭಗೊಳ್ಳುವ ದಶಮಂಟಪಗಳ ಪ್ರದರ್ಶನ ಮುಂಜಾನೆವರೆಗೂ ಸಂಚರಿಸಿ ಎಲ್ಲರಿಗೂ ಪ್ರದರ್ಶನ ನೀಡಲಿವೆ.

ಪೌರಾಣಿಕ ಹಿನ್ನೆಲೆಯ ಕಥೆಯನ್ನು ಪ್ರದರ್ಶಿಸಲು ನಾಲ್ಕು ಶಕ್ತಿದೇವತೆಗಳ ದೇವಾಲಯ ಸಮಿತಿಗಳು ಸೇರಿದಂತೆ 10 ದೇವಾಲಯಗಳು ಕೂಡ ಒಂದೊಂದು ಕಥೆಯನ್ನು ಆಯ್ಕೆಮಾಡಿಕೊಂಡು ಪ್ರದರ್ಶನ ನೀಡಲಿವೆ.

ದಶಮಂಟಪಗಳ ಪ್ರದರ್ಶನ ನೋಡಲೆಂದೇ ರಾಜ್ಯದ ವಿವಿಧೆಡೆಗಳಿಂದ ಲಕ್ಷಾಂತರ ಜನರು ಮಡಿಕೇರಿಗೆ ಆಗಮಿಸಿರುವುದು ವಿಶೇಷವೆನಿಸಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

5 hours ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

5 hours ago

ಓದುಗರ ಪತ್ರ: ದಸರೆಯಲ್ಲಿ ಕಂಬಳದ ವ್ಯಾಮೋಹವೇಕೇ?

ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗದ ಕಾಯಕಲ್ಪವೂ, ಅವರಿವರ ಭಾವವೂ

ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…

5 hours ago

ಮಳೆಗಾಲದ ಸಾಂಕ್ರಾಮಿಕ ರೋಗಗಳ ಆತಂಕ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ   ಮಡಿಕೇರಿ:…

5 hours ago