Mysore
24
broken clouds

Social Media

ಬುಧವಾರ, 18 ಫೆಬ್ರವರಿ 2026
Light
Dark

ತಲಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ : ಹರಿದು ಬರುತ್ತಿರುವ ಭಕ್ತ ಸಾಗರ

ಮಡಿಕೇರಿ : ಕೊಡಗಿನ ಕುಲದೇವಿ, ಜೀವನದಿ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ತಲಕಾವೇರಿಗೆ ಭಕ್ತ ಸಾಗರವೇ ಹರಿದು ಬರುತ್ತಿದೆ.

ಸಾಂಪ್ರದಾಯಿಕ ಉಡುಪಿನಲ್ಲಿ ಮೂಲ‌ನಿವಾಸಿ‌ ಮಹಿಳೆಯರು ಆಗಮಿಸುತ್ತಿದ್ದು, ಹಾಡು ನೃತ್ಯದ ಮೂಲಕ ದಕ್ಷಿಣ ಗಂಗೆ ಕಾವೇರಿಯ ಸ್ವಾಗತಕ್ಕೆ ಸಜ್ಜಾಗಿದ್ದಾರೆ. ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಬ್ರಹ್ಮಕುಂಡಿಕೆಯಲ್ಲಿ ಮಾತೆ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಲಿದ್ದಾಳೆ. ತೀರ್ಥೋದ್ಭವದ ವೀಕ್ಷಣೆಯ ವೇಳೆ ನೂಕು ನುಗ್ಗಲು ಉಂಟಾಗದಂತೆ ಎಲ್‌ಇಡಿ ಪರದೆಗಳ ವ್ಯವಸ್ಥೆ ಹಾಗೂ ಭಕ್ತರನ್ನು ಭಾಗಮಂಡಲದಿಂದ ತಲಕಾವೇರಿಗೆ ಕರೆದೊಯ್ಯಲು ಬಸ್​ ಗಳ ವ್ಯವಸ್ಥೆಯನ್ನೂ ಮಾಡಲಾಗಿದೆ.

Tags:
error: Content is protected !!