Categories: ಕೊಡಗು

ಶಿಶು ಮರಣ ತಡೆಗೆ ಹೆಚ್ಚಿನ ಜಾಗೃತಿ ಮೂಡಿಸಿ :ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯ ಸೂಚನೆ

ಮಡಿಕೇರಿ: ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಶಿಶು ಮತ್ತು ತಾಯಿ ಮರಣ ನಿಯಂತ್ರಣ ಸಂಬಂಧ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಶಿಶು ಮತ್ತು ತಾಯಿ ಆರೋಗ್ಯದ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಇರಬೇಕು. ಉತ್ತಮ ಆರೋಗ್ಯವಿದ್ದಲ್ಲಿ ಕುಟುಂಬ ನಿರ್ವಹಣೆ ಚೆನ್ನಾಗಿರುತ್ತದೆ. ಇದರಿಂದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಹೇಳಿದರು.

ಜಿಲ್ಲೆಯ ಹಾಡಿಗಳು ಸೇರಿದಂತೆ ಎಲ್ಲೆಡೆ ಆರೋಗ್ಯ ಮತ್ತು ಶುಚಿತ್ವ ಬಗ್ಗೆ ಜಾಗೃತಿ ಮೂಡಿಸಬೇಕು. 5 ವರ್ಷದೊಳಗಿನ ಮಕ್ಕಳಿಗೆ ಕಾಲಕಾಲಕ್ಕೆ ಚುಚ್ಚುಮದ್ದು ಕೊಡಿಸುವಂತಾಗಲು ಅರಿವು ಮೂಡಿಸಬೇಕು. ಹಾಗೆಯೇ ಗರ್ಭಿಣೀಯರು ಸಹ ಕಾಲ ಕಾಲಕ್ಕೆ ಆರೋಗ್ಯ ಪರಿಶೀಲಿಸಿಕೊಳ್ಳಬೇಕು ಎಂದರು.

ಜಿಲ್ಲಾ ಚುಚ್ಚುಮದ್ದು ಅಧಿಕಾರಿ ಡಾ.ಮಧುಸೂದನ್ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಜುಲೈ ಮಾಹೆಯಿಂದ ಅಕ್ಟೋಬರ್ ಅಂತ್ಯದವರೆಗೆ 5 ವರ್ಷದೊಳಗಿನ 15 ಶಿಶುಗಳು ವಿವಿಧ ಕಾರಣಗಳಿಂದ ಸಾವು ಸಂಭವಿಸಿದೆ ಎಂದರು.

ಈ 15 ಶಿಶುಗಳಲ್ಲಿ 7 ಪ್ರಕರಣಗಳು ಅವಧಿ ಪೂರ್ವ ಜನನ, ಅನುವಂಶೀಯ ಕಾರಣಗಳು ಹಾಗೂ ಜನನ ಸಂದರ್ಭದಲ್ಲಿ ರಕ್ತಸ್ರಾವ ಸಂಭವಿಸಿದ ಉಸಿರಾಟದ ತೊಂದರೆಯಿಂದ ಸಾವು. ಉಳಿದಂತೆ ನಾಟಿ ಔಷಧಿ ಕುಡಿಸಿ, ಜ್ವರ, ಶೀತ, ಕೆಮ್ಮು ಬಂದು ಮಕ್ಕಳ ಸಾವು ಸಂಭವಿಸಿದೆ. ಗರ್ಭಿಣೀಯರು ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳದಿರುವುದು ಹೀಗೆ ಹಲವು ಕಾರಣಗಳಿಂದ ಸಾವು ಸಂಭವಿಸಿದೆ. ಜಿಲ್ಲೆಯಲ್ಲಿ ಶೇ.87 ಕ್ಕೂ ಹೆಚ್ಚು ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಆಗುತ್ತಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶ್ರೀನಿವಾಸ್ ಮಾತನಾಡಿ, ಜಿಲ್ಲಾ ಸರ್ವೇಕ್ಷಣಾ ಘಟಕದಿಂದ ಆರೋಗ್ಯ ಮತ್ತು ಪರಿಸರ ಶುಚಿತ್ವದ ಬಗ್ಗೆ ಹೆಚ್ಚಿನ ಅರಿವು ಮೂಡಿಸಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ ಜನವರಿಯಿಂದ ಇದುವರೆಗೆ ನಾಯಿ ಕಡಿತ ಪ್ರಕರಣಗಳು 4,356, ಹಾವು ಕಡಿತ ಪ್ರಕರಣಗಳು 297, ಅತಿಸಾರ ಬೇಧಿ 2,427 ಪ್ರಕರಣಗಳು, ಡೆಂಗ್ಯೂ 272, ಇಲಿಜ್ವರ 13, ಕಾಲರಾ ಮತ್ತು ಮಲೇರಿಯಾ ತಲಾ 3 ಪ್ರಕರಣಗಳು ವರದಿಯಾಗಿದ್ದು, ಎಲ್ಲರೂ ಸಹ ಗುಣಮುಖರಾಗಿದ್ದಾರೆ. ನಾಯಿ ಮತ್ತು ಹಾವು ಕಡಿತಕ್ಕೆ ಎಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಿ ದಾಸ್ತಾನು ಇದೆ ಎಂದು ಮಾಹಿತಿ ನೀಡಿದರು.

ಯಾವುದೇ ಪ್ರಾಣಿ ಕಚ್ಚಿದರೂ ಸಹ ಉದಾಸೀನ ಮಾಡದೆ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುವಂತಾಗಬೇಕು ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಅವರು ಇದೇ ಸಂದರ್ಭದಲ್ಲಿ ಸಲಹೆ ನೀಡಿದರು.

ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ತಾಲ್ಲೂಕು ವೈದ್ಯಾಕಾರಿಗಳಾದ ಡಾ.ಯತಿರಾಜು, ಡಾ.ಚೇತನ್, ಸ್ತ್ರೀ ಆರೋಗ್ಯ ತಜ್ಞರಾದ ಡಾ.ಸೋಮಶೇಖರ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ರಂಗಧಾಮಪ್ಪ, ಪಶುಪಾಲನ ಇಲಾಖೆ ಉಪ ನಿರ್ದೇಶಕ ಲಿಂಗರಾಜು ದೊಡ್ಡಮನಿ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಗಾಯತ್ರಿ, ಆಹಾರ ಸುರಕ್ಷತೆ ವಿಭಾಗದ ಮಂಜುನಾಥ್, ಜಿ.ಪಂ.ಇಇ ನಾಯಕ್, ವಿವಿಧ ಇಲಾಖಾ ಅಧಿಕಾರಿಗಳು ಇತರರು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುದ್ದಿನ ಹಸುವಿಗೆ ಸೀಮಂತ ನೆರವೇರಿಸಿದ ರೈತ ಮಹಿಳೆ!

ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…

43 mins ago

ಕಾಡಾನೆ ದಾಳಿ; ಶಾಲೆಯ ಗೇಟ್, ನೀರಿನ ಪೈಪ್ ನಾಶ

ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…

47 mins ago

‘ಪ್ರಾದೇಶಿಕ ಪಕ್ಷಗಳಿಂದಷ್ಟೇ ರಾಜ್ಯಗಳ ಅಭಿವೃದ್ಧಿ ಸಾಧ್ಯ’

‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…

52 mins ago

ಡಿಕೆಶಿ ಬರಿಗೈಲಿ ವಾಪಸ್

ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…

1 hour ago

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…

13 hours ago