Categories: ಕೊಡಗು

ಶಿಶು ಮರಣ ತಡೆಗೆ ಹೆಚ್ಚಿನ ಜಾಗೃತಿ ಮೂಡಿಸಿ :ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯ ಸೂಚನೆ

ಮಡಿಕೇರಿ: ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಶಿಶು ಮತ್ತು ತಾಯಿ ಮರಣ ನಿಯಂತ್ರಣ ಸಂಬಂಧ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಶಿಶು ಮತ್ತು ತಾಯಿ ಆರೋಗ್ಯದ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಇರಬೇಕು. ಉತ್ತಮ ಆರೋಗ್ಯವಿದ್ದಲ್ಲಿ ಕುಟುಂಬ ನಿರ್ವಹಣೆ ಚೆನ್ನಾಗಿರುತ್ತದೆ. ಇದರಿಂದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಹೇಳಿದರು.

ಜಿಲ್ಲೆಯ ಹಾಡಿಗಳು ಸೇರಿದಂತೆ ಎಲ್ಲೆಡೆ ಆರೋಗ್ಯ ಮತ್ತು ಶುಚಿತ್ವ ಬಗ್ಗೆ ಜಾಗೃತಿ ಮೂಡಿಸಬೇಕು. 5 ವರ್ಷದೊಳಗಿನ ಮಕ್ಕಳಿಗೆ ಕಾಲಕಾಲಕ್ಕೆ ಚುಚ್ಚುಮದ್ದು ಕೊಡಿಸುವಂತಾಗಲು ಅರಿವು ಮೂಡಿಸಬೇಕು. ಹಾಗೆಯೇ ಗರ್ಭಿಣೀಯರು ಸಹ ಕಾಲ ಕಾಲಕ್ಕೆ ಆರೋಗ್ಯ ಪರಿಶೀಲಿಸಿಕೊಳ್ಳಬೇಕು ಎಂದರು.

ಜಿಲ್ಲಾ ಚುಚ್ಚುಮದ್ದು ಅಧಿಕಾರಿ ಡಾ.ಮಧುಸೂದನ್ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಜುಲೈ ಮಾಹೆಯಿಂದ ಅಕ್ಟೋಬರ್ ಅಂತ್ಯದವರೆಗೆ 5 ವರ್ಷದೊಳಗಿನ 15 ಶಿಶುಗಳು ವಿವಿಧ ಕಾರಣಗಳಿಂದ ಸಾವು ಸಂಭವಿಸಿದೆ ಎಂದರು.

ಈ 15 ಶಿಶುಗಳಲ್ಲಿ 7 ಪ್ರಕರಣಗಳು ಅವಧಿ ಪೂರ್ವ ಜನನ, ಅನುವಂಶೀಯ ಕಾರಣಗಳು ಹಾಗೂ ಜನನ ಸಂದರ್ಭದಲ್ಲಿ ರಕ್ತಸ್ರಾವ ಸಂಭವಿಸಿದ ಉಸಿರಾಟದ ತೊಂದರೆಯಿಂದ ಸಾವು. ಉಳಿದಂತೆ ನಾಟಿ ಔಷಧಿ ಕುಡಿಸಿ, ಜ್ವರ, ಶೀತ, ಕೆಮ್ಮು ಬಂದು ಮಕ್ಕಳ ಸಾವು ಸಂಭವಿಸಿದೆ. ಗರ್ಭಿಣೀಯರು ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳದಿರುವುದು ಹೀಗೆ ಹಲವು ಕಾರಣಗಳಿಂದ ಸಾವು ಸಂಭವಿಸಿದೆ. ಜಿಲ್ಲೆಯಲ್ಲಿ ಶೇ.87 ಕ್ಕೂ ಹೆಚ್ಚು ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಆಗುತ್ತಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶ್ರೀನಿವಾಸ್ ಮಾತನಾಡಿ, ಜಿಲ್ಲಾ ಸರ್ವೇಕ್ಷಣಾ ಘಟಕದಿಂದ ಆರೋಗ್ಯ ಮತ್ತು ಪರಿಸರ ಶುಚಿತ್ವದ ಬಗ್ಗೆ ಹೆಚ್ಚಿನ ಅರಿವು ಮೂಡಿಸಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ ಜನವರಿಯಿಂದ ಇದುವರೆಗೆ ನಾಯಿ ಕಡಿತ ಪ್ರಕರಣಗಳು 4,356, ಹಾವು ಕಡಿತ ಪ್ರಕರಣಗಳು 297, ಅತಿಸಾರ ಬೇಧಿ 2,427 ಪ್ರಕರಣಗಳು, ಡೆಂಗ್ಯೂ 272, ಇಲಿಜ್ವರ 13, ಕಾಲರಾ ಮತ್ತು ಮಲೇರಿಯಾ ತಲಾ 3 ಪ್ರಕರಣಗಳು ವರದಿಯಾಗಿದ್ದು, ಎಲ್ಲರೂ ಸಹ ಗುಣಮುಖರಾಗಿದ್ದಾರೆ. ನಾಯಿ ಮತ್ತು ಹಾವು ಕಡಿತಕ್ಕೆ ಎಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಿ ದಾಸ್ತಾನು ಇದೆ ಎಂದು ಮಾಹಿತಿ ನೀಡಿದರು.

ಯಾವುದೇ ಪ್ರಾಣಿ ಕಚ್ಚಿದರೂ ಸಹ ಉದಾಸೀನ ಮಾಡದೆ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುವಂತಾಗಬೇಕು ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಅವರು ಇದೇ ಸಂದರ್ಭದಲ್ಲಿ ಸಲಹೆ ನೀಡಿದರು.

ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ತಾಲ್ಲೂಕು ವೈದ್ಯಾಕಾರಿಗಳಾದ ಡಾ.ಯತಿರಾಜು, ಡಾ.ಚೇತನ್, ಸ್ತ್ರೀ ಆರೋಗ್ಯ ತಜ್ಞರಾದ ಡಾ.ಸೋಮಶೇಖರ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ರಂಗಧಾಮಪ್ಪ, ಪಶುಪಾಲನ ಇಲಾಖೆ ಉಪ ನಿರ್ದೇಶಕ ಲಿಂಗರಾಜು ದೊಡ್ಡಮನಿ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಗಾಯತ್ರಿ, ಆಹಾರ ಸುರಕ್ಷತೆ ವಿಭಾಗದ ಮಂಜುನಾಥ್, ಜಿ.ಪಂ.ಇಇ ನಾಯಕ್, ವಿವಿಧ ಇಲಾಖಾ ಅಧಿಕಾರಿಗಳು ಇತರರು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

5 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

5 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

5 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

6 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

15 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

16 hours ago