ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ ಸುಮಾರು 104 ಮೊಬೈಲ್ಗಳನ್ನು ಪತ್ತೆಹಚ್ಚಿದ್ದು, ಮಂಗಳವಾರ ವಾರಿಸುದಾರರಿಗೆ ಮೊಬೈಲ್ಗಳನ್ನು ಹಸ್ತಾಂತರಿಸಲಾಯಿತು.
ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ಸಿಇಐಆರ್ ಪೋರ್ಟಲ್ ಮೂಲಕ ಕಳೆದುಹೋಗಿದ್ದ ಮೊಬೈಲ್ಗಳನ್ನು ಪತ್ತೆಹಚ್ಚಲಾಗಿದೆ. ಅಂದಾಜು 11 ಲಕ್ಷ ಮೌಲ್ಯದ ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. 2021, 2022 ಸೇರಿದಂತೆ 2025ರಲ್ಲಿ ಹೆಚ್ಚಾಗಿ ಕಳೆದಿದ್ದ ಮೊಬೈಲ್ಗಳನ್ನು ಪತ್ತೆ ಹಚ್ಚಲಾಗಿದೆ. ಕರ್ನಾಟಕ ಮಾತ್ರವಲ್ಲದೆ, ತಮಿಳುನಾಡು, ಕೇರಳ ರಾಜ್ಯದಿಂದಲೂ ಮೊಬೈಲ್ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದರು.
ಸಾರ್ವಜನಿಕರು ತಮ್ಮ ಮೊಬೈಲ್ ಕಳೆದುಕೊಂಡಲ್ಲಿ ಸಮೀಪದ ಪೊಲೀಸ್ ಠಾಣೆಗೆ ಹೋಗಿ ದೂರು ಸಲ್ಲಿಸಬಹುದು. ಅದಕ್ಕಿಂತಲೂ ಉತ್ತಮ ಸಿಇಐಆರ್ ಪೋರ್ಟಲ್. ಕಳೆದುಹೋಗಿರುವ ಮೊಬೈಲ್ಗಳ ಮಾಹಿತಿಯನ್ನು ಪೋರ್ಟಲ್ನಲ್ಲಿ ಹಾಕಿದ್ದರೆ ಪತ್ತೆಹಚ್ಚಲು ಸಹಕಾರಿಯಾಗಲಿದೆ ಎಂದರು.
ಕಳೆದ ಒಂದು ತಿಂಗಳಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಕಾರ್ಯಾಚರಣೆ ನಡೆಸಿದ ಎಲ್ಲಾ ಅಧಿಕಾರಿ, ಸಿಬ್ಬಂದಿಗಳಿಗೆ ಅಭಿನಂದನೆ ತಿಳಿಸುವುದಾಗಿ ಮಾಹಿತಿ ನೀಡಿದರು.
ಸೈಬರ್ ಕ್ರೈಂ ಡಿವೈಎಸ್ಪಿ ತಳವಾರ, ಡಿವೈಎಸ್ಪಿ ಸೂರಜ್, ವೃತ್ತ ನಿರೀಕ್ಷಕರಾದ ಮೇದಪ್ಪ, ರಾಜು, ಗ್ರಾಮಾಂತರ ಠಾಣಾಧಿಕಾರಿ ಚಂದ್ರಶೇಖರ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…