ಕೊಡಗು

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ ಸುಮಾರು 104 ಮೊಬೈಲ್‌ಗಳನ್ನು ಪತ್ತೆಹಚ್ಚಿದ್ದು, ಮಂಗಳವಾರ ವಾರಿಸುದಾರರಿಗೆ ಮೊಬೈಲ್‌ಗಳನ್ನು ಹಸ್ತಾಂತರಿಸಲಾಯಿತು.

ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ಸಿಇಐಆರ್ ಪೋರ್ಟಲ್ ಮೂಲಕ ಕಳೆದುಹೋಗಿದ್ದ ಮೊಬೈಲ್‌ಗಳನ್ನು ಪತ್ತೆಹಚ್ಚಲಾಗಿದೆ. ಅಂದಾಜು 11 ಲಕ್ಷ ಮೌಲ್ಯದ ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. 2021, 2022 ಸೇರಿದಂತೆ 2025ರಲ್ಲಿ ಹೆಚ್ಚಾಗಿ ಕಳೆದಿದ್ದ ಮೊಬೈಲ್‌ಗಳನ್ನು ಪತ್ತೆ ಹಚ್ಚಲಾಗಿದೆ. ಕರ್ನಾಟಕ ಮಾತ್ರವಲ್ಲದೆ, ತಮಿಳುನಾಡು, ಕೇರಳ ರಾಜ್ಯದಿಂದಲೂ ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದರು.

ಸಾರ್ವಜನಿಕರು ತಮ್ಮ ಮೊಬೈಲ್ ಕಳೆದುಕೊಂಡಲ್ಲಿ ಸಮೀಪದ ಪೊಲೀಸ್ ಠಾಣೆಗೆ ಹೋಗಿ ದೂರು ಸಲ್ಲಿಸಬಹುದು. ಅದಕ್ಕಿಂತಲೂ ಉತ್ತಮ ಸಿಇಐಆರ್ ಪೋರ್ಟಲ್. ಕಳೆದುಹೋಗಿರುವ ಮೊಬೈಲ್‌ಗಳ ಮಾಹಿತಿಯನ್ನು ಪೋರ್ಟಲ್‌ನಲ್ಲಿ ಹಾಕಿದ್ದರೆ ಪತ್ತೆಹಚ್ಚಲು ಸಹಕಾರಿಯಾಗಲಿದೆ ಎಂದರು.

ಕಳೆದ ಒಂದು ತಿಂಗಳಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಕಾರ್ಯಾಚರಣೆ ನಡೆಸಿದ ಎಲ್ಲಾ ಅಧಿಕಾರಿ, ಸಿಬ್ಬಂದಿಗಳಿಗೆ ಅಭಿನಂದನೆ ತಿಳಿಸುವುದಾಗಿ ಮಾಹಿತಿ ನೀಡಿದರು.

ಸೈಬರ್ ಕ್ರೈಂ ಡಿವೈಎಸ್‌ಪಿ ತಳವಾರ, ಡಿವೈಎಸ್‌ಪಿ ಸೂರಜ್, ವೃತ್ತ ನಿರೀಕ್ಷಕರಾದ ಮೇದಪ್ಪ, ರಾಜು, ಗ್ರಾಮಾಂತರ ಠಾಣಾಧಿಕಾರಿ ಚಂದ್ರಶೇಖರ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 10 ಶುಕ್ರವಾರ

14 mins ago

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

20 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

21 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

21 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 9 ಗುರುವಾರ

1 day ago

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

2 days ago