ಕೊಡಗು

ಬೃಹತ್‌ ನಕಲಿ ಸಿಮ್‌ ದಂಧೆ ಬೆಳಕಿಗೆ: ಮಡಿಕೇರಿಯ ಸಿಮ್‌ ಡಿಸ್ಟ್ರಿಬ್ಯೂಟರ್‌ ಬಂಧನ

ಮಡಿಕೇರಿ: ಆನ್‌ಲೈನ್‌ ವಂಚಕರಿಗೆ ಗ್ರಾಹಕರ ಬದಲಿ ಸಿಮ್‌ ಕಾರ್ಡ್‌ಗಳನ್ನು ಸರಬರಾಜು ಮಾಡುತ್ತಿದ್ದ ಮಡಿಕೇರಿಯ ಸಿಮ್‌ ಡಿಸ್ಟ್ರಿಬ್ಯೂಟರ್‌ ಅಬ್ದುಲ್‌ ರೋಷನ್‌ ಎಂಬಾತನನ್ನು ಕೇರಳದ ಮಲಪ್ಪುರಂನ ಸೈಬರ್‌ ಪೊಲೀಸರು ಬುಧವಾರ ರಾತ್ರಿ ( ಮೇ 8 ) ಬಂಧಿಸಿದ್ದಾರೆ.

2018ರಿಂದ ಏರ್‌ಟೆಲ್‌ ಸಿಮ್‌ ಡಿಸ್ಟ್ರಿಬ್ಯೂಟರ್‌ ಆಗಿ ಕೆಲಸ ನಿರ್ವಹಿಸಿದ್ದ ಆರೋಪಿ ಸದ್ಯ ಜಿಯೊ ಸಿಮ್‌ ಡಿಸ್ಟ್ರಿಬ್ಯೂಟರ್‌ ಆಗಿ ಕೆಲಸ ನಿರ್ವಹಿಸುತ್ತಿದ್ದು, ವೆಂಗಾರ ಮೂಲಕ ವ್ಯಕ್ತಿ ನೀಡಿದ ದೂರಿನ ತನಿಖೆ ವೇಳೆ ಈತ ನಡೆಸುತ್ತಿದ್ದ ದಂಧೆ ಬೆಳಕಿಗೆ ಬಂದಿದೆ.

ಬಂಧನದ ವೇಳೆ 40,000 ಸಿಮ್‌ ಕಾರ್ಡ್‌ಗಳು, 180 ಮೊಬೈಲ್‌ ಫೋನ್‌ಗಳು ಹಾಗೂ 6 ಬಯೋಮೆಟ್ರಿಕ್‌ ಸಾಧನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಾರ್ಚ್‌ನಲ್ಲಿಯೇ ದಾಖಲಾಗಿತ್ತು ದೂರು:

ವೆಂಗಾರ ಮೂಲದ ವ್ಯಕ್ತಿ ಮಾರ್ಚ್‌ 10ರಂದು ಆನ್‌ಲೈನ್‌ ಟ್ರೇಡಿಂಗ್‌ನಲ್ಲಿ 1.08 ಕೋಟಿ ರೂಪಾಯಿ ವಂಚನೆಗೆ ಒಳಗಾಗಿ ಈ ಸಂಬಂಧ ದೂರನ್ನು ದಾಖಲಿಸಿದ್ದರು. ಈ ದೂರಿನ ಮೇರೆಗೆ ತನಿಖೆ ಆರಂಭಿಸಿದಾಗ ವಂಚಕರಿಗೆ ಅಬ್ದುಲ್‌ ರೋಷನ್‌ ಸಿಮ್‌ ಕಾರ್ಡ್‌ ಸರಬರಾಜು ಮಾಡುತ್ತಿದ್ದ ಮಾಹಿತಿ ಬೆಳಕಿಗೆ ಬಂದಿದೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

8 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

10 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

18 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

18 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

18 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

18 hours ago