Mysore
24
scattered clouds

Social Media

ಗುರುವಾರ, 05 ಫೆಬ್ರವರಿ 2026
Light
Dark

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು, ಕೊನೆಗೆ ಸಾವನ್ನಪ್ಪುತ್ತಿರುವ ಘಟನೆಗಳು ನಡೆಯುತ್ತಿದೆ. ಈ ಅಜ್ಞಾತ ಮಾರಕ ರೋಗದಿಂದಾಗಿ ರೈತರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

ಪಾಲೂರು ಗ್ರಾಮದ ನಿವಾಸಿ ಹಾಗೂ ರೈತ ಸೂದನ ಎಸ್.ಈರಪ್ಪ ಅವರು ಮಾತನಾಡಿ, “ಆರೋಗ್ಯವಂತ ಹಸುಗಳ ಕಾಲುಗಳು ದಿನೇದಿನ ಕೃಶವಾಗುತ್ತಾ ಬರುತ್ತಿವೆ. ಇದರಿಂದ ರಾಸುಗಳು ಕ್ರಮೇಣ ಸಾವಿಗೀಡಾಗುತ್ತಿವೆ. ಈ ರೋಗದ ಬಗ್ಗೆ ರೈತರು ಬಹಳ ಕಂಗಾಲಾಗಿದ್ದಾರೆ” ಎಂದು ವಿವರಿಸಿದರು.

ಪಾಲೂರು ಹಾಗೂ ಸಮೀಪದ ಹಳ್ಳಿಗಳಲ್ಲಿ ಹೈನುಗಾರಿಕೆಯನ್ನು ಪ್ರಮುಖ ಉದ್ಯಮವನ್ನಾಗಿ ಮಾಡಿಕೊಂಡಿರುವ ರೈತರು ಈ ರೋಗಕ್ಕೆ ಪರಿಹಾರ ಕಾಣದೆ ತೊಂದರೆಗೆ ಒಳಗಾಗಿದ್ದಾರೆ. ಪಶು ವೈದ್ಯಕೀಯ ಇಲಾಖೆಯವರು ಸೂಕ್ತ ಸ್ಪಂದನೆ ನೀಡುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ. ರೋಗದ ಲಕ್ಷಣಗಳು ಮತ್ತು ಕಾರಣಗಳ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲದೆ ರೈತರು ಹೆಚ್ಚು ಆತಂಕಕ್ಕೆ ಒಳಗಾಗಿದ್ದಾರೆ.

ಈ ಸಮಸ್ಯೆಗೆ ತಕ್ಷಣ ಗಮನ ಹರಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಜಿಲ್ಲಾಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ರೋಗದ ನಿರ್ಣಯ, ಚಿಕಿತ್ಸೆ ಹಾಗೂ ರೈತರಿಗೆ ಸೂಕ್ತ ನೆರವು ನೀಡಬೇಕೆಂದು ಅವರು ವಿನಂತಿಸಿಕೊಂಡಿದ್ದಾರೆ.

 

Tags:
error: Content is protected !!