ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು, ಕೊನೆಗೆ ಸಾವನ್ನಪ್ಪುತ್ತಿರುವ ಘಟನೆಗಳು ನಡೆಯುತ್ತಿದೆ. ಈ ಅಜ್ಞಾತ ಮಾರಕ ರೋಗದಿಂದಾಗಿ ರೈತರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.
ಪಾಲೂರು ಗ್ರಾಮದ ನಿವಾಸಿ ಹಾಗೂ ರೈತ ಸೂದನ ಎಸ್.ಈರಪ್ಪ ಅವರು ಮಾತನಾಡಿ, “ಆರೋಗ್ಯವಂತ ಹಸುಗಳ ಕಾಲುಗಳು ದಿನೇದಿನ ಕೃಶವಾಗುತ್ತಾ ಬರುತ್ತಿವೆ. ಇದರಿಂದ ರಾಸುಗಳು ಕ್ರಮೇಣ ಸಾವಿಗೀಡಾಗುತ್ತಿವೆ. ಈ ರೋಗದ ಬಗ್ಗೆ ರೈತರು ಬಹಳ ಕಂಗಾಲಾಗಿದ್ದಾರೆ” ಎಂದು ವಿವರಿಸಿದರು.
ಪಾಲೂರು ಹಾಗೂ ಸಮೀಪದ ಹಳ್ಳಿಗಳಲ್ಲಿ ಹೈನುಗಾರಿಕೆಯನ್ನು ಪ್ರಮುಖ ಉದ್ಯಮವನ್ನಾಗಿ ಮಾಡಿಕೊಂಡಿರುವ ರೈತರು ಈ ರೋಗಕ್ಕೆ ಪರಿಹಾರ ಕಾಣದೆ ತೊಂದರೆಗೆ ಒಳಗಾಗಿದ್ದಾರೆ. ಪಶು ವೈದ್ಯಕೀಯ ಇಲಾಖೆಯವರು ಸೂಕ್ತ ಸ್ಪಂದನೆ ನೀಡುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ. ರೋಗದ ಲಕ್ಷಣಗಳು ಮತ್ತು ಕಾರಣಗಳ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲದೆ ರೈತರು ಹೆಚ್ಚು ಆತಂಕಕ್ಕೆ ಒಳಗಾಗಿದ್ದಾರೆ.
ಈ ಸಮಸ್ಯೆಗೆ ತಕ್ಷಣ ಗಮನ ಹರಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಜಿಲ್ಲಾಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ರೋಗದ ನಿರ್ಣಯ, ಚಿಕಿತ್ಸೆ ಹಾಗೂ ರೈತರಿಗೆ ಸೂಕ್ತ ನೆರವು ನೀಡಬೇಕೆಂದು ಅವರು ವಿನಂತಿಸಿಕೊಂಡಿದ್ದಾರೆ.
ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…
ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್ನಲ್ಲಿ…
ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಅಧಿಸೂಚನೆ ಪ್ರಕಟಿಸಿದೆ.…
ಮೈಸೂರು : ವಿ.ವಿ ಮೊಹಲ್ಲಾ ಉಪವಿಭಾಗ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಸುವ ಕೆಲಸದ ನಿಮಿತ್ತ ಫೆ.6 ಮತ್ತು 7 ರಂದು…
ಬೆಂಗಳೂರು : ಕೋಲಾರ ಜಿಲ್ಲೆ, ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆಎನ್ ನಂಜೇಗೌಡ ಅವರು…
ಹುಣಸೂರು : ರಾಜ್ಯದಲ್ಲೇ ಜಾನುವಾರುಗಳ ಪ್ರಮುಖ ಜಾತ್ರೆಯಲ್ಲೊಂದಾದ ಹುಣಸೂರು ತಾಲೂಕಿನ ರತ್ನಪುರಿ(ದರ್ಗ)ಯಲ್ಲಿ ಹಿಂದೂ-ಮುಸ್ಲಿಮರ ಭಾವೈಕ್ಯತೆ ಮೆರೆವ ಶ್ರೀ ಅಂಜನೇಯ ಸ್ವಾಮಿಯ…