ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು, ಕೊನೆಗೆ ಸಾವನ್ನಪ್ಪುತ್ತಿರುವ ಘಟನೆಗಳು ನಡೆಯುತ್ತಿದೆ. ಈ ಅಜ್ಞಾತ ಮಾರಕ ರೋಗದಿಂದಾಗಿ ರೈತರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.
ಪಾಲೂರು ಗ್ರಾಮದ ನಿವಾಸಿ ಹಾಗೂ ರೈತ ಸೂದನ ಎಸ್.ಈರಪ್ಪ ಅವರು ಮಾತನಾಡಿ, “ಆರೋಗ್ಯವಂತ ಹಸುಗಳ ಕಾಲುಗಳು ದಿನೇದಿನ ಕೃಶವಾಗುತ್ತಾ ಬರುತ್ತಿವೆ. ಇದರಿಂದ ರಾಸುಗಳು ಕ್ರಮೇಣ ಸಾವಿಗೀಡಾಗುತ್ತಿವೆ. ಈ ರೋಗದ ಬಗ್ಗೆ ರೈತರು ಬಹಳ ಕಂಗಾಲಾಗಿದ್ದಾರೆ” ಎಂದು ವಿವರಿಸಿದರು.
ಪಾಲೂರು ಹಾಗೂ ಸಮೀಪದ ಹಳ್ಳಿಗಳಲ್ಲಿ ಹೈನುಗಾರಿಕೆಯನ್ನು ಪ್ರಮುಖ ಉದ್ಯಮವನ್ನಾಗಿ ಮಾಡಿಕೊಂಡಿರುವ ರೈತರು ಈ ರೋಗಕ್ಕೆ ಪರಿಹಾರ ಕಾಣದೆ ತೊಂದರೆಗೆ ಒಳಗಾಗಿದ್ದಾರೆ. ಪಶು ವೈದ್ಯಕೀಯ ಇಲಾಖೆಯವರು ಸೂಕ್ತ ಸ್ಪಂದನೆ ನೀಡುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ. ರೋಗದ ಲಕ್ಷಣಗಳು ಮತ್ತು ಕಾರಣಗಳ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲದೆ ರೈತರು ಹೆಚ್ಚು ಆತಂಕಕ್ಕೆ ಒಳಗಾಗಿದ್ದಾರೆ.
ಈ ಸಮಸ್ಯೆಗೆ ತಕ್ಷಣ ಗಮನ ಹರಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಜಿಲ್ಲಾಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ರೋಗದ ನಿರ್ಣಯ, ಚಿಕಿತ್ಸೆ ಹಾಗೂ ರೈತರಿಗೆ ಸೂಕ್ತ ನೆರವು ನೀಡಬೇಕೆಂದು ಅವರು ವಿನಂತಿಸಿಕೊಂಡಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…