ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು, ಕೊನೆಗೆ ಸಾವನ್ನಪ್ಪುತ್ತಿರುವ ಘಟನೆಗಳು ನಡೆಯುತ್ತಿದೆ. ಈ ಅಜ್ಞಾತ ಮಾರಕ ರೋಗದಿಂದಾಗಿ ರೈತರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.
ಪಾಲೂರು ಗ್ರಾಮದ ನಿವಾಸಿ ಹಾಗೂ ರೈತ ಸೂದನ ಎಸ್.ಈರಪ್ಪ ಅವರು ಮಾತನಾಡಿ, “ಆರೋಗ್ಯವಂತ ಹಸುಗಳ ಕಾಲುಗಳು ದಿನೇದಿನ ಕೃಶವಾಗುತ್ತಾ ಬರುತ್ತಿವೆ. ಇದರಿಂದ ರಾಸುಗಳು ಕ್ರಮೇಣ ಸಾವಿಗೀಡಾಗುತ್ತಿವೆ. ಈ ರೋಗದ ಬಗ್ಗೆ ರೈತರು ಬಹಳ ಕಂಗಾಲಾಗಿದ್ದಾರೆ” ಎಂದು ವಿವರಿಸಿದರು.
ಪಾಲೂರು ಹಾಗೂ ಸಮೀಪದ ಹಳ್ಳಿಗಳಲ್ಲಿ ಹೈನುಗಾರಿಕೆಯನ್ನು ಪ್ರಮುಖ ಉದ್ಯಮವನ್ನಾಗಿ ಮಾಡಿಕೊಂಡಿರುವ ರೈತರು ಈ ರೋಗಕ್ಕೆ ಪರಿಹಾರ ಕಾಣದೆ ತೊಂದರೆಗೆ ಒಳಗಾಗಿದ್ದಾರೆ. ಪಶು ವೈದ್ಯಕೀಯ ಇಲಾಖೆಯವರು ಸೂಕ್ತ ಸ್ಪಂದನೆ ನೀಡುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ. ರೋಗದ ಲಕ್ಷಣಗಳು ಮತ್ತು ಕಾರಣಗಳ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲದೆ ರೈತರು ಹೆಚ್ಚು ಆತಂಕಕ್ಕೆ ಒಳಗಾಗಿದ್ದಾರೆ.
ಈ ಸಮಸ್ಯೆಗೆ ತಕ್ಷಣ ಗಮನ ಹರಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಜಿಲ್ಲಾಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ರೋಗದ ನಿರ್ಣಯ, ಚಿಕಿತ್ಸೆ ಹಾಗೂ ರೈತರಿಗೆ ಸೂಕ್ತ ನೆರವು ನೀಡಬೇಕೆಂದು ಅವರು ವಿನಂತಿಸಿಕೊಂಡಿದ್ದಾರೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…