ಕೊಡಗು

ದೀಪಾ ಭಾಸ್ತಿ ಅವರನ್ನೂ ಕೂಡ ದಸರಾ ಉದ್ಘಾಟನೆಗೆ ಕರೆಯಬೇಕಿತ್ತು : ಹೆಚ್.ವಿಶ್ವನಾಥ್‌

ಮಡಿಕೇರಿ : ಐತಿಹಾಸಿಕ ಹಿನ್ನೆಲೆಯ ಮೈಸೂರು ದಸರಾ ಉತ್ಸವದ ಉದ್ಘಾಟನೆಯ ವಿಚಾರದಲ್ಲಿ ರಾಜ್ಯ ಸರ್ಕಾರ ಬೂಕರ್ ಪ್ರಶಸ್ತಿಗೆ ಭಾಜನರಾದ ಬಾನು ಮುಸ್ತಾಕ್ ಹಾಗೂ ದೀಪಾ ಭಾಸ್ತಿ ಅವರನ್ನು ಒಂದೇ ರೀತಿಯಲ್ಲಿ ನೋಡಬೇಕಿತ್ತು. ಆ ಮೂಲಕ ದೀಪಾ ಭಾಸ್ತಿ ಅವರನ್ನು ಕೂಡ ದಸರಾ ಉದ್ಘಾಟನೆಗೆ ಕರೆಯಬೇಕಾಗಿತ್ತು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಂಸದ ಅಡಗೂರು ಹೆಚ್.ವಿಶ್ವನಾಥ್ ಅವರು ಅಭಿಪ್ರಾಯಪಟ್ಟಿದ್ದಾರೆ.

ಮಡಿಕೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ಕಾಕ್ ಅವರನ್ನು ಆಹ್ವಾನಿಸಿದ ಕ್ರಮ ಸರಿಯಾಗಿದೆ. ಈ ಹಂತದಲ್ಲಿ ಬೂಕರ್ ವಿಜೇತೆ ದೀಪಾ ಭಾಸ್ತಿಯವರನ್ನು ಕೂಡ ಕರೆಯಬಹುದಿತ್ತು. ಈ ಲೋಪವನ್ನು ಈಗಲೂ ಸರಿಪಡಿಸಿಕೊಳ್ಳಲು ಅವಕಾಶವಿದೆ ಎಂದರು.

ದಸರಾ ಉತ್ಸವದಂದು ಚಾಮುಂಡಿ ಬೆಟ್ಟದಲ್ಲಿ ಬಾನು ಮುಸ್ತಾಕ್ ಅವರಿಂದ ದಸರಾ ಉದ್ಘಾಟನೆ ಹಾಗೂ ಅರಮನೆ ಮೈದಾನದ ಕಾರ್ಯಕ್ರಮಕ್ಕೆ ಬಾನು ಮುಷ್ಕಾಕ್ ಅವರೊಂದಿಗೆ ದೀಪಾ ಭಾಸ್ತಿಯವರನ್ನು ಆಹ್ವಾನಿಸಿ ದೊಡ್ಡ ಕಾರ್ಯಕ್ರಮವನ್ನು ಆಯೋಚಿಸಿ ಎಂದು ಸಲಹೆ ನೀಡಿದರು.

ಕನ್ನಡದ ಹಿರಿಮೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೇರಿಸಿದ ಬೂಕರ್ ಪ್ರಶಸ್ತಿಯು ಮೂಲ ಲೇಖಕಿ ಬಾನು ಮುಷ್ಕಾಕ್ ಹಾಗೂ ಅನುವಾದಕಿ ದೀಪಾ ಭಾಸ್ತಿಯವರಿಗು ಸಂದಿದೆ. ಬೂಕರ್ ಪ್ರಶಸ್ತಿಯ ಮೂಲಕ ಕನ್ನಡ ಭಾಷೆಯನ್ನು ಇವರು ಅಂತರಾಷ್ಟ್ರೀಯ ಮಟ್ಟಕ್ಕೇರಿಸಿದ್ದಾರೆ ಎಂದರು.

ಬಹುತ್ವದ ಭಾರತದಲ್ಲಿ ಸಂವಿಧಾನವನ್ನು ಒಪ್ಪಿ ಮುನ್ನಡೆಯುತ್ತಿದ್ದೇವೆ, ಜಾಗತಿಕ ಮಟ್ಟದಲ್ಲಿ ಕನ್ನಡಕ್ಕೆ ಗೌರವ ತಂದುಕೊಟ್ಟ ಬಾನು ಮುಷ್ಕಾಕ್ ಅವರು ಕನ್ನಡದ ಮಗಳೇ ಆಗಿದ್ದಾರೆ ಎಂದು ತಿಳಿಸಿದರು.

ಧರ್ಮಸ್ಥಳ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಎಸ್‌ಐಟಿ ತನಿಖೆಯನ್ನು ಶೀಘ್ರು ಮುಗಿಸಬೇಕು. ಧರ್ಮಸ್ಥಳದಲ್ಲಿ ಏನಾಗಿದೆ, ಏನಾಗುತ್ತಿದೆ ಎನ್ನುವ ವಿಚಾರವನ್ನು ಜನರಿಗೆ ಸೃಷ್ಟಿಕರಣ ನೀಡಬೇಕು. ಎಸ್‌ಐಟಿ ತನಿಖೆ ಚೆನ್ನಾಗಿ ನಡೆಯುತ್ತಿದ್ದು, ಎನ್‌ಐಎ ತನಿಖೆಯ ಅಗತ್ಯವಿಲ್ಲವೆಂದು ಹೆಚ್.ವಿಶ್ವನಾಥ್ ಹೇಳಿದರು.

ಆಂದೋಲನ ಡೆಸ್ಕ್

Recent Posts

ಮುಡುಕುತೊರೆ ಜಾತ್ರೆ : ಪೋಸ್ಟರ್ ಬಿಡುಗಡೆಗೊಳಿಸಿದ ಸಚಿವ ಎಚ್‌ಸಿಎಂ

ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…

5 mins ago

ಗುರಿ ಇಟ್ಟುಕೊಂಡು ನಿರಂತರ ಓದಿ : ಪಿಯುಸಿ ವಿದ್ಯಾರ್ಥಿಗಳಿಗೆ ನಿಶಾಂತ್‌ ಸಲಹೆ

ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…

40 mins ago

ಉತ್ತರ ಪ್ರದೇಶದಲ್ಲಿ ಭಾರತೀಯ ವಾಯುಪಡೆಯ ವಿಮಾನ ಪತನ: ಇಬ್ಬರು ಪೈಲಟ್‌ಗಳು ಬಚಾವ್‌

ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್‌ರಾಜ್‌ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್‌ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳನ್ನು…

1 hour ago

ನೈಸರ್ಗಿಕ ಕೃಷಿ ಪದ್ಧತಿ ಎಲ್ಲರ ಪಾಲಿಗೆ ಜೀವನೋಪಾಯವಾಗಲಿ: ಡಾ. ಶರಣ ಪ್ರಕಾಶ್‌ ಪಾಟೀಲ್

ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…

2 hours ago

ಚಾಮುಂಡಿಬೆಟ್ಟದ ಪಾರಂಪರಿಕತೆಗೆ ಧಕ್ಕೆಯಾಗದಂತೆ ಅಭಿವೃದ್ಧಿ: ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು: ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ…

2 hours ago

ಅಶ್ಲೀಲ ಮೆಸೇಜ್‌ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ನೋಟಿಸ್‌

ಬೆಂಗಳೂರು: ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್‌, ಕಮೆಂಟ್‌ ಮಾಡಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ಪೊಲೀಸರು…

2 hours ago