ಕೊಡಗು

ದೀಪಾ ಭಾಸ್ತಿ ಅವರನ್ನೂ ಕೂಡ ದಸರಾ ಉದ್ಘಾಟನೆಗೆ ಕರೆಯಬೇಕಿತ್ತು : ಹೆಚ್.ವಿಶ್ವನಾಥ್‌

ಮಡಿಕೇರಿ : ಐತಿಹಾಸಿಕ ಹಿನ್ನೆಲೆಯ ಮೈಸೂರು ದಸರಾ ಉತ್ಸವದ ಉದ್ಘಾಟನೆಯ ವಿಚಾರದಲ್ಲಿ ರಾಜ್ಯ ಸರ್ಕಾರ ಬೂಕರ್ ಪ್ರಶಸ್ತಿಗೆ ಭಾಜನರಾದ ಬಾನು ಮುಸ್ತಾಕ್ ಹಾಗೂ ದೀಪಾ ಭಾಸ್ತಿ ಅವರನ್ನು ಒಂದೇ ರೀತಿಯಲ್ಲಿ ನೋಡಬೇಕಿತ್ತು. ಆ ಮೂಲಕ ದೀಪಾ ಭಾಸ್ತಿ ಅವರನ್ನು ಕೂಡ ದಸರಾ ಉದ್ಘಾಟನೆಗೆ ಕರೆಯಬೇಕಾಗಿತ್ತು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಂಸದ ಅಡಗೂರು ಹೆಚ್.ವಿಶ್ವನಾಥ್ ಅವರು ಅಭಿಪ್ರಾಯಪಟ್ಟಿದ್ದಾರೆ.

ಮಡಿಕೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ಕಾಕ್ ಅವರನ್ನು ಆಹ್ವಾನಿಸಿದ ಕ್ರಮ ಸರಿಯಾಗಿದೆ. ಈ ಹಂತದಲ್ಲಿ ಬೂಕರ್ ವಿಜೇತೆ ದೀಪಾ ಭಾಸ್ತಿಯವರನ್ನು ಕೂಡ ಕರೆಯಬಹುದಿತ್ತು. ಈ ಲೋಪವನ್ನು ಈಗಲೂ ಸರಿಪಡಿಸಿಕೊಳ್ಳಲು ಅವಕಾಶವಿದೆ ಎಂದರು.

ದಸರಾ ಉತ್ಸವದಂದು ಚಾಮುಂಡಿ ಬೆಟ್ಟದಲ್ಲಿ ಬಾನು ಮುಸ್ತಾಕ್ ಅವರಿಂದ ದಸರಾ ಉದ್ಘಾಟನೆ ಹಾಗೂ ಅರಮನೆ ಮೈದಾನದ ಕಾರ್ಯಕ್ರಮಕ್ಕೆ ಬಾನು ಮುಷ್ಕಾಕ್ ಅವರೊಂದಿಗೆ ದೀಪಾ ಭಾಸ್ತಿಯವರನ್ನು ಆಹ್ವಾನಿಸಿ ದೊಡ್ಡ ಕಾರ್ಯಕ್ರಮವನ್ನು ಆಯೋಚಿಸಿ ಎಂದು ಸಲಹೆ ನೀಡಿದರು.

ಕನ್ನಡದ ಹಿರಿಮೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೇರಿಸಿದ ಬೂಕರ್ ಪ್ರಶಸ್ತಿಯು ಮೂಲ ಲೇಖಕಿ ಬಾನು ಮುಷ್ಕಾಕ್ ಹಾಗೂ ಅನುವಾದಕಿ ದೀಪಾ ಭಾಸ್ತಿಯವರಿಗು ಸಂದಿದೆ. ಬೂಕರ್ ಪ್ರಶಸ್ತಿಯ ಮೂಲಕ ಕನ್ನಡ ಭಾಷೆಯನ್ನು ಇವರು ಅಂತರಾಷ್ಟ್ರೀಯ ಮಟ್ಟಕ್ಕೇರಿಸಿದ್ದಾರೆ ಎಂದರು.

ಬಹುತ್ವದ ಭಾರತದಲ್ಲಿ ಸಂವಿಧಾನವನ್ನು ಒಪ್ಪಿ ಮುನ್ನಡೆಯುತ್ತಿದ್ದೇವೆ, ಜಾಗತಿಕ ಮಟ್ಟದಲ್ಲಿ ಕನ್ನಡಕ್ಕೆ ಗೌರವ ತಂದುಕೊಟ್ಟ ಬಾನು ಮುಷ್ಕಾಕ್ ಅವರು ಕನ್ನಡದ ಮಗಳೇ ಆಗಿದ್ದಾರೆ ಎಂದು ತಿಳಿಸಿದರು.

ಧರ್ಮಸ್ಥಳ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಎಸ್‌ಐಟಿ ತನಿಖೆಯನ್ನು ಶೀಘ್ರು ಮುಗಿಸಬೇಕು. ಧರ್ಮಸ್ಥಳದಲ್ಲಿ ಏನಾಗಿದೆ, ಏನಾಗುತ್ತಿದೆ ಎನ್ನುವ ವಿಚಾರವನ್ನು ಜನರಿಗೆ ಸೃಷ್ಟಿಕರಣ ನೀಡಬೇಕು. ಎಸ್‌ಐಟಿ ತನಿಖೆ ಚೆನ್ನಾಗಿ ನಡೆಯುತ್ತಿದ್ದು, ಎನ್‌ಐಎ ತನಿಖೆಯ ಅಗತ್ಯವಿಲ್ಲವೆಂದು ಹೆಚ್.ವಿಶ್ವನಾಥ್ ಹೇಳಿದರು.

ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

6 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

8 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

17 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

17 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

17 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

17 hours ago