ಕೊಡಗು

ಜಿಂಕೆ ಬೇಟೆ: ಇಬ್ಬರು ಬಂಧನ, ಓರ್ವ ಪರಾರಿ

ಮಡಿಕೇರಿ: ಅಕ್ರಮವಾಗಿ ಎರಡು ಹೆಣ್ಣು ಜಿಂಕೆಗಳನ್ನು ಬೇಟೆಯಾಡಿದ ಇಬ್ಬರು ವ್ಯಕ್ತಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ.

ಕುಶಾಲನಗರ ವಲಯದ ಆನೆಕಾಡು ಶಾಖೆಯ ಅರಣ್ಯಾಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ದಾರೆ. ಈ ವೇಳೆ ಅತ್ತೂರು ನಲ್ಲೂರು ಗ್ರಾಮದ ನವೀನ್ ಕರುಂಬಯ್ಯ ರವರಿಗೆ ಸೇರಿದ ಮುನ್ಸಿಫ್ -ಡಿ ಕಾಫಿ ತೋಟದಲ್ಲಿ ಎರಡು ಹೆಣ್ಣು ಜಿಂಕೆಗಳನ್ನು ಬೇಟೆಯಾಡಿ ಮಾಂಸವನ್ನಾಗಿ ಪರಿವರ್ತಿಸಿ ಶೇಖರಿಸಿಟ್ಟಿದ್ದುದನ್ನು ಹಾಗೂ ಜಿಂಕೆಗಳ ಚರ್ಮ, ತಲೆ ಕಾಲುಗಳನ್ನು ಹಾಗೂ ಹೊಟ್ಟೆಯ ಒಳಭಾಗದ ಅಂಗಾಂಗಳನ್ನು ತೋಟದಲ್ಲಿ ಹೂತಿಟ್ಟಿದ್ದುದನ್ನು ಪತ್ತೆಹಚ್ಚಿದ್ದಾರೆ.

ಎರಡು ಜಿಂಕೆಗಳನ್ನು ಬೇಟೆಯಾಡಿದ ಆರೋಪಿಗಳಾದ ಇದೇ ತೋಟದ ಲೈನ್ ಮನೆಯಲ್ಲಿ ವಾಸವಾಗಿರುವ ಗಣೇಶ್ ಅವರ ಮಗ ಸುನೀಲ್ (34) ಮತ್ತು ಕೆ.ಎಂ. ದೇವಯ್ಯರವರ ಮಗ ಕೆ..ಡಿ. ಮುತ್ತಣ್ಣ (59)ಎಂಬುವವರನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಮತ್ತೊಬ್ಬ ಆರೋಪಿ ನಾಣಯ್ಯ ಅವರ ಮಗ ಎ.ಎನ್ ಶ್ಯಾಮ್ (50) ಎಂಬಾತ ತಲೆಮರೆಸಿಕೊಂಡಿದ್ದು, ಈತನಿಗೆ ಪೊಲೀಸರು ಬಲೆ ಬೀಸಿದ್ದಾರೆ. ಬಂಧಿತ ಆರೋಪಿಗಳಿಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಸೆರೆಗೆ ಡ್ರೋನ್ ಕಾರ್ಯಾಚರಣೆ

ಕೆ.ಬಿ.ರಮೇಶನಾಯಕ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಡ್ರಗ್ಸ್ ಮಾರಾಟ, ಸೇವನೆಯನ್ನು ಬುಡಸಮೇತ ಕಿತ್ತು ಹಾಕುವುದರ ಜತೆಗೆ, ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯದ ಮೇಲೆ…

31 seconds ago

1.65 ಕೋಟಿ ಕುಟುಂಬಗಳಿಗೆ ಗೃಹಜ್ಯೋತಿ ಬೆಳಕು

ಆಂದೋಲನ ವಿಶೇಷ ಸಂದರ್ಶನದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಹೆಮ್ಮೆಯ ನುಡಿ ಆಂದೋಲನ: ರಾಜ್ಯ ಸರ್ಕಾರ ಸಾವಿರ ದಿನಗಳನ್ನು ಪೂರೈಸಿದ್ದು,…

4 mins ago

‘ನಾನು ಬೆಳೆಸಿದ ಕಾಡಿನಲ್ಲಿ ನನಗೆ ವಾಸಕ್ಕೆ ಜಾಗ ಇಲ್ವಾ?’

ಮಂಜು ಕೋಟೆ ೪೦ ವರ್ಷಗಳ ಕಾಲ ಆದಿವಾಸಿಗಳ ಪರ ಹೋರಾಟ ನಡೆಸಿದ ದಿಟ್ಟ ಮಹಿಳೆ ಸೋಮಮ್ಮ ಇನ್ನು ನೆನಪು ಮಾತ್ರ…

10 mins ago

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

10 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

13 hours ago