ಕೊಡಗು : ಅಪಘಾತ ವಿಮೆ ಪರಿಹಾರ ನೀಡುವಲ್ಲಿ ಕೆಎಸ್ಆರ್ಟಿಸಿ ಸಂಸ್ಥೆ ವಿಫಲವಾದ ಹಿನ್ನೆಲೆಯಲ್ಲಿ ಸಾರಿಗೆ ಬಸ್ ಅನ್ನು ನ್ಯಾಯಾಲಯ ಜಪ್ತಿ ಮಾಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದಿದೆ. ಇಲ್ಲಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸರು ಬಸ್ ಅನ್ನು ಜಪ್ತಿ ಮಾಡಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. 2010ರಲ್ಲಿ ವಿರಾಜಪೇಟೆ ನಗರದ ನಿವಾಸಿ ಮುನಾವರ್ ತಮ್ಮ ಕುಟುಂಬದವರೊಂದಿಗೆ ಸ್ಯಾಂಟ್ರೋ ಕಾರಿನಲ್ಲಿ ಮೈಸೂರಿಗೆ ತೆರಳುತ್ತಿದ್ದರು. ಈ ಸಂದರ್ಭ ಹುಣಸೂರು ತಾಲ್ಲೂಕಿನ ಕಲ್ಲಬೆಟ್ಟ ಬಳಿ ಎದುರಿನಿಂದ ವೇಗವಾಗಿ ಬಂದ ಕೆಎಸ್ಆರ್ಟಿಸಿ ಬಸ್ ಕಾರಿಗೆ ಬಲವಾಗಿ ಅಪ್ಪಳಿಸಿತ್ತು. ಪರಿಣಾಮ ಮುನಾವರ್ ಸಾವನ್ನಪ್ಪಿದ್ದರು.
ಅಪಘಾತದ ಬಳಿಕ ನ್ಯಾಯಾಲಯದಲ್ಲಿ ವಿಚಾರಣೆಯಾಗಿ ಮುನಾವರ್ ಕುಟುಂಬಕ್ಕೆ ಕೆಎಸ್ಆರ್ಟಿಸಿ ಪರಿಹಾರವನ್ನೂ ನೀಡಿತ್ತು. ಆದರೆ ಸಂಪೂರ್ಣ ಜಖಂಗೊಡಿದ್ದ ಕಾರಿಗೂ ವಿಮಾ ಪರಿಹಾರ ಹಣ ನೀಡುವಂತೆ ಮುನಾವರ್ ಪತ್ನಿ ಫಾತಿಮಾ ಅಫ್ಸರ್ ವಿರಾಜಪೇಟೆ ಹೆಚ್ಚುವರಿ ಸೆಷನ್ಸ್ ನ್ಯಾಲಾಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿದಾರರಿಗೆ ವಿಮಾ ಪರಿಹಾರ ಹಣ ರೂ 1,48,130 ಪಾವತಿಸುವಂತೆ ಆದೇಶ ಮಾಡಿತ್ತು.
ಇದನ್ನು ಪ್ರಶ್ನಿಸಿ ಕೆಎಸ್ಆರ್ಟಿಸಿ, ಹೈಕೋರ್ಟ್ ಮೊರೆ ಹೋಗಿತ್ತು. ಆದರೆ ಹೈಕೋರ್ಟ್ ಕೆಎಸ್ಆರ್ಟಿಸಿ ಅರ್ಜಿಯನ್ನು ತಳ್ಳಿಹಾಕಿದ್ದು, ನ್ಯಾಯಾಲಯದ ಆದೇಶ ಪಾಲಿಸುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ವಿರಾಜಪೇಟೆ ನ್ಯಾಯಾಲಯ 2021ರ ಮಾರ್ಚ್ನಲ್ಲಿ ಅಪಘಾತ ಪರಿವಹಾರ ವಿಮಾ ಹಣ ಪಾವತಿಸುವಂತೆ ಸಾರಿಗೆ ನಿಗಮಕ್ಕೆ ಬಹಳಷ್ಟು ಬಾರಿ ಸೂಚಿಸಿತ್ತು. ಆದರೂ ನಿಗಮ ನ್ಯಾಯಾಲಯದ ಆದೇಶವನ್ನು ನಿರ್ಲಕ್ಷ್ಯ ಮಾಡುತ್ತಲೇ ಬಂದಿತ್ತು.
ಈ ಹಿನ್ನೆಲೆಯಲ್ಲಿ ವಿರಾಜಪೇಟೆ ಹೆಚ್ಚುವರಿ ನ್ಯಾಯಾಲಯ ಇದೀಗ ಸಾರಿಗೆ ಬಸ್ ಅನ್ನೇ ಜಪ್ತಿ ಮಾಡುವಂತೆ ಆದೇಶ ಮಾಡಿತು. ಈ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸರು ವಿರಾಜಪೇಟೆ ಬಸ್ ನಿಲ್ದಾಣಕ್ಕೆ ತೆರಳಿ ಪ್ರಕರಣಕ್ಕೆ ಸಂಬಂಧಪಟ್ಟ ಕೊಳ್ಳೇಗಾಲ ಡಿಪೋಕ್ಕೆ ಸೇರಿದ ಬಸ್ ಅನ್ನು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಪ್ರಕರಣದ ಪರವಾಗಿ ವಿರಾಜಪೇಟೆ ವಕೀಲ ಟಿಪಿ ಕೃಷ್ಣ. ರಾಕೇಶ್ ಹಾಗೂ ಸಿ. ದರ್ಶನ್ ವಾದ ಮಂಡಿಸಿದ್ದರು.
ಮೈಸೂರು : ಆಷಾಢ ಶುಕ್ರವಾರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ವಿಶೇಷ ಪೂಜೆ ಪ್ರಯುಕ್ತ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ…
ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…
ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…
ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…
ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…
ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…