ಕೊಡಗು

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ಕೇವಲ 0.05 ಮಿ.ಮೀ. ಮಳೆಯಾಗಿತ್ತು.

ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ 1,348.74 ಮಿ.ಮೀ. ಮಳೆಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 2,428.29 ಮಿ.ಮೀ. ಮಳೆಯಾಗಿತ್ತು.

ಮಡಿಕೇರಿ ತಾಲ್ಲೂಕಿನಲ್ಲಿ ಕಳೆದ 24 ಗಂಟೆಗಳಲ್ಲಿ ಸರಾಸರಿ 85.35 ಮಿ.ಮೀ. ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗೆ 2,215.04 ಮಿ.ಮೀ. ಮಳೆಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 3,629.23 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲ್ಲೂಕಿನಲ್ಲಿ 36.15 ಮಿ.ಮೀ., ಪೊನ್ನಂಪೇಟೆ ತಾಲ್ಲೂಕಿನಲ್ಲಿ 23.85 ಮಿ.ಮೀ., ಸೋಮವಾರಪೇಟೆ ತಾಲ್ಲೂಕಿನಲ್ಲಿ 22.85 ಮಿ.ಮೀ. ಹಾಗೂ ಕುಶಾಲನಗರ ತಾಲ್ಲೂಕಿನಲ್ಲಿ 16.80 ಮಿ.ಮೀ. ಮಳೆಯಾಗಿದೆ.

ಜಿಲ್ಲೆಯಲ್ಲಿ ಹೋಬಳಿವಾರು ಮಳೆ ಪ್ರಮಾಣ ಗಮನಿಸಿದರೆ, ಸಂಪಾಜೆಯಲ್ಲಿ 105.90 ಮಿ.ಮೀ., ಭಾಗಮಂಡಲದಲ್ಲಿ 105.20 ಮಿ.ಮೀ., ಮಡಿಕೇರಿಯಲ್ಲಿ 76.60 ಮಿ.ಮೀ. ಹಾಗೂ ನಾಪೋಕ್ಲಿನಲ್ಲಿ 53.70 ಮಿ.ಮೀ. ಮಳೆಯಾಗಿದೆ.

ಇನ್ನು ಶಾಂತಳ್ಳಿಯಲ್ಲಿ 46.80 ಮಿ.ಮೀ., ಹುದಿಕೇರಿಯಲ್ಲಿ 43.60 ಮಿ.ಮೀ., ವಿರಾಜಪೇಟೆಯಲ್ಲಿ 37.90 ಮಿ.ಮೀ., ಅಮ್ಮತ್ತಿಯಲ್ಲಿ 34.40 ಮಿ.ಮೀ. ಹಾಗೂ ಶ್ರೀಮಂಗಲದಲ್ಲಿ 29.50 ಮಿ.ಮೀ. ಮಳೆಯಾಗಿದೆ.

ಪೊನ್ನಂಪೇಟೆಯಲ್ಲಿ 14.20 ಮಿ.ಮೀ., ಬಾಳೆಲೆಯಲ್ಲಿ 8.10 ಮಿ.ಮೀ., ಸೋಮವಾರಪೇಟೆಯಲ್ಲಿ 22.30 ಮಿ.ಮೀ., ಶನಿವಾರಸಂತೆಯಲ್ಲಿ 12.80 ಮಿ.ಮೀ., ಕೊಡ್ಲಿಪೇಟೆಯಲ್ಲಿ 9.50 ಮಿ.ಮೀ., ಕುಶಾಲನಗರದಲ್ಲಿ 16.10 ಮಿ.ಮೀ. ಹಾಗೂ ಸುಂಟಿಕೊಪ್ಪದಲ್ಲಿ 17.50 ಮಿ.ಮೀ. ಮಳೆಯಾಗಿದೆ.

ಒಟ್ಟಾರೆ ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಗಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆಯ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.

ಆಂದೋಲನ ಡೆಸ್ಕ್

Recent Posts

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

49 mins ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

52 mins ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

3 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

3 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

4 hours ago

ಓದುಗರ ಪತ್ರ: ನಕಲಿ ಔಷಧ ಜಾಲ ಬೇರುಸಹಿತ ಕಿತ್ತೊಗೆಯಲಿ

ರಾಜ್ಯದಲ್ಲಿ ನಕಲಿ ಔಷಧಗಳ ಜಲವು ನಾಗರಿಕರ ಪ್ರಾಣದೊಂದಿಗೆ ಚೆಟವಾಡುತ್ತಿರುವುದು ತೀವ್ರ ಆತಂಕಕಾರಿ ಮತ್ತು ಅಕ್ಷಮ್ಯ. ತನಿಖೆಯಲ್ಲಿ ಸುಮಾರು ೩,೫೦೦ ಔಷಧ…

4 hours ago