ಕೊಡಗು

ಕುರ್ಚಿ ಕಿತ್ತಾಟದಲ್ಲಿ ಅಭಿವೃದ್ಧಿ ಹಿನ್ನಡೆ : ಸಂಸದ ಯದುವೀರ್‌ ಬೇಸರ

ಮಡಿಕೇರಿ : ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಅವರ ನಡುವಿನ ಸಿಎಂ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆರೋಗ್ಯ ಸೇವೆಯನ್ನು ಪಡೆದುಕೊಳ್ಳಿ : ಶಾಸಕ ಜಿ.ಟಿ.ಡಿ

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ಬರ ನಡುವಿನ ಕುರ್ಚಿ ಕಿತ್ತಾಟದಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗುತ್ತಿದೆ. ಕಾಂಗ್ರೆಸ್‌ನ ಆತಂರಿಕ ವಿಚಾರದ ಬಗ್ಗೆ ನಮಗೆ ಯಾವುದೇ ಕಾಳಜಿ ಇಲ್ಲ ಅಂತ ಕಾಂಗ್ರೆಸ್‌ ನಾಯಕರೇ ಹೇಳಿದ್ದಾರೆಂದು ತಿಳಿಸಿದ್ದಾರೆ.

ರಾಜ್ಯದ ಜನತೆ ಅವರನ್ನ ಆಡಳಿತ ಪಕ್ಷವಾಗಿ ಆಯ್ಕೆ ಮಾಡಿದ್ದಾರೆ. ಜನರ ಪರವಾಗಿ ಆಡಳಿತ ನಡೆಸುವುದು ಅವರ ಆದ್ಯ ಕರ್ತವ್ಯವಾಗಿದೆ. ಅವರ ಪಕ್ಷದಲ್ಲಿ ಆಂತರಿಕವಾಗಿ ಏನು ನಡೆಯುತ್ತಿದೆಯೋ ಅದು ನಡೆಯಲ್ಲಿ, ಆದ್ರೆ ರಾಜ್ಯದ ಆಡಳಿತ ಜನರ ಹಿತಕ್ಕಾಗಿ ಕೆಲಸ ಮಾಡುವುದು ಮೊದಲ ಕರ್ತವ್ಯ ಅದನ್ನ ಮಾಡಲಿ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

9 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

9 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

9 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

9 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

9 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

10 hours ago