ಕೊಡಗು

ದುಬಾರೆ ಆನೆ ಶಿಬಿರದಲ್ಲೂ ಕಂಜನ್‌ ಜೊತೆ ಗುದ್ದಾಡಿಕೊಂಡ ಧನಂಜಯ ಆನೆ

ಕೊಡಗು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿದ್ದ ಆನೆಗಳಾದ ಧನಂಜಯ ಹಾಗೂ ಕಂಜನ್ ದುಬಾರೆ ಶಿಬಿರದಲ್ಲಿ ಗುದ್ದಾಡಿಕೊಂಡಿದ್ದು, ಮಾವುತರ ಸಮಯಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ದಸರಾಗೆ ಆಗಮಿಸಿದ್ದ ಧನಂಜಯ ಹಾಗೂ ಕಂಜನ್‌ ಆನೆಗಳ ಕಚ್ಚಾಟ ಮತ್ತೆ ಮುಂದುವರಿದಿದ್ದು, ದುಬಾರೆ ಆನೆ ಶಿಬಿರದಲ್ಲಿ ಧನಂಜಯ ಆನೆಯು ಕಂಜನ್‌ಗೆ ಕೊಂಬಿನಿಂದ ತಿವಿದು ಗುದ್ದಾಟ ನಡೆಸಿದೆ.

ಕಳೆದ ತಿಂಗಳು ಮೈಸೂರು ಅರಮನೆಯಲ್ಲೂ ಕೂಡ ಧನಂಜಯ ಕಂಜನ್‌ ಆನೆಯನ್ನು ಅಟ್ಟಾಡಿಸಿಕೊಂಡು ಹೋಗಿತ್ತು. ಪರಿಣಾಮ ಕಂಜನ್‌ ಆನೆ ಅರಮನೆಯಿಂದ ಹೊರಗಡೆ ಬಂದು ಜನತೆಯಲ್ಲಿ ಆತಂಕ ಸೃಷ್ಟಿಸಿತ್ತು.

ಈಗ ದಸರಾವನ್ನು ಯಶಸ್ವಿಯಾಗಿ ಮುಗಿಸಿ ಕಾಡಿನತ್ತ ಹೋದರೂ ಅಲ್ಲೂ ಕೂಡ ಧನಂಜಯ ಹಾಗೂ ಕಂಜನ್‌ ಆನೆಗಳು ಈ ರೀತಿ ಗುದ್ದಾಟ ನಡೆಸುತ್ತಿರುವುದು ಕಾವಾಡಿಗರು ಹಾಗೂ ಮಾವುತರಿಗೆ ಬೇಸರ ತರಿಸಿದೆ.

ಘರ್ಷಣೆ ಬಳಿಕ ಆನೆಗಳ ಆರೋಗ್ಯ ತಪಾಸಣೆ ನಡೆಸಲಾಗಿದೆ ಎನ್ನಲಾಗಿದ್ದು, ಎರಡೂ ಆನೆಗಳು ಆರೋಗ್ಯವಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.

 

 

ಆಂದೋಲನ ಡೆಸ್ಕ್

Recent Posts

ರಾಜ್ಯದ ಹಲವೆಡೆ ಇಂದೂ ಕೂಡ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ…

2 mins ago

ಕುವೈತ್‌ ಮೇಲೆ ಇರಾನ್‌ ಭೀಕರ ದಾಳಿ: ಭಾರತೀಯ ಕಾರ್ಮಿಕ ಸಾವು

ಟೆಹರಾನ್:‌ ಕುವೈತ್‌ ವಿದ್ಯುತ್‌ ಸ್ಥಾವರದ ಮೇಲೆ ಇರಾನ್‌ ಭೀಕರ ದಾಳಿ ನಡೆಸಿದ ಪರಿಣಾಮ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಇದು ದೇಶದ…

33 mins ago

ನಂಜನಗೂಡಿನ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತ: ಓರ್ವ ಭಕ್ತ ಸಾವು

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ…

49 mins ago

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಸಾವು

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ…

1 hour ago

ಇವ ನಮ್ಮವ ಮಸೂದೆ; ಅಮಾಯಕ ಯುವ ಜೀವಗಳ ರಕ್ಷಣೆ

ಜಾತಿ ಆಧಾರಿತ ಅಪರಾಧಕ್ಕೆ ತಡೆ, ಅಂತರ್ಜಾತಿ ವಿವಾಹಿತರಿಗೆ ರಕ್ಷಣೆ ಒದಗಿಸುವ ಮಹತ್ವಪೂರ್ಣವಾದ ‘ಇವ ನಮ್ಮವ ಇವ ನಮ್ಮವ’ ಮಸೂದೆಯನ್ನು ರಾಜ್ಯ…

2 hours ago

ಪ್ರೊ.ಡಿ.ಆನಂದ್ – ಮ್ಯಾನೇಜ್‌ಮೆಂಟ್ ಶಿಕ್ಷಣದ ಜಂಗಮ

ನಾಳೆ ಸೇವೆಯಿಂದ ನಿವೃತ್ತಿ ಹೊಂದಲಿರುವ ಮೇಷ್ಟ್ರು  ಸಿ.ಹರಕುಮಾರ್, ಬರಹಗಾರ ಮೂರ್ನಾಲ್ಕು ದಶಕಗಳ ಹಿಂದೆ ಮ್ಯಾನೇಜ್ಮೆಂಟ್ ಕೋರ್ಸ್ ಅಥವಾ ಎಂಬಿಎ ಪದವಿ…

2 hours ago