ಕೊಡಗು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿದ್ದ ಆನೆಗಳಾದ ಧನಂಜಯ ಹಾಗೂ ಕಂಜನ್ ದುಬಾರೆ ಶಿಬಿರದಲ್ಲಿ ಗುದ್ದಾಡಿಕೊಂಡಿದ್ದು, ಮಾವುತರ ಸಮಯಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ದಸರಾಗೆ ಆಗಮಿಸಿದ್ದ ಧನಂಜಯ ಹಾಗೂ ಕಂಜನ್ ಆನೆಗಳ ಕಚ್ಚಾಟ ಮತ್ತೆ ಮುಂದುವರಿದಿದ್ದು, ದುಬಾರೆ ಆನೆ ಶಿಬಿರದಲ್ಲಿ ಧನಂಜಯ ಆನೆಯು ಕಂಜನ್ಗೆ ಕೊಂಬಿನಿಂದ ತಿವಿದು ಗುದ್ದಾಟ ನಡೆಸಿದೆ.
ಕಳೆದ ತಿಂಗಳು ಮೈಸೂರು ಅರಮನೆಯಲ್ಲೂ ಕೂಡ ಧನಂಜಯ ಕಂಜನ್ ಆನೆಯನ್ನು ಅಟ್ಟಾಡಿಸಿಕೊಂಡು ಹೋಗಿತ್ತು. ಪರಿಣಾಮ ಕಂಜನ್ ಆನೆ ಅರಮನೆಯಿಂದ ಹೊರಗಡೆ ಬಂದು ಜನತೆಯಲ್ಲಿ ಆತಂಕ ಸೃಷ್ಟಿಸಿತ್ತು.
ಈಗ ದಸರಾವನ್ನು ಯಶಸ್ವಿಯಾಗಿ ಮುಗಿಸಿ ಕಾಡಿನತ್ತ ಹೋದರೂ ಅಲ್ಲೂ ಕೂಡ ಧನಂಜಯ ಹಾಗೂ ಕಂಜನ್ ಆನೆಗಳು ಈ ರೀತಿ ಗುದ್ದಾಟ ನಡೆಸುತ್ತಿರುವುದು ಕಾವಾಡಿಗರು ಹಾಗೂ ಮಾವುತರಿಗೆ ಬೇಸರ ತರಿಸಿದೆ.
ಘರ್ಷಣೆ ಬಳಿಕ ಆನೆಗಳ ಆರೋಗ್ಯ ತಪಾಸಣೆ ನಡೆಸಲಾಗಿದೆ ಎನ್ನಲಾಗಿದ್ದು, ಎರಡೂ ಆನೆಗಳು ಆರೋಗ್ಯವಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…
ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…
ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೊರಾದ ನೈಟ್ಕ್ಲಬ್ ಬೀರ್ಚ್ ಬೈ ರೋಮಿಯೋ ಲೇನ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…
ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…
ಗೋವಾ: ಇಲ್ಲಿನ ನೈಟ್ ಕ್ಲಬ್ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್…
ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…