ಕೊಡಗು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿದ್ದ ಆನೆಗಳಾದ ಧನಂಜಯ ಹಾಗೂ ಕಂಜನ್ ದುಬಾರೆ ಶಿಬಿರದಲ್ಲಿ ಗುದ್ದಾಡಿಕೊಂಡಿದ್ದು, ಮಾವುತರ ಸಮಯಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ದಸರಾಗೆ ಆಗಮಿಸಿದ್ದ ಧನಂಜಯ ಹಾಗೂ ಕಂಜನ್ ಆನೆಗಳ ಕಚ್ಚಾಟ ಮತ್ತೆ ಮುಂದುವರಿದಿದ್ದು, ದುಬಾರೆ ಆನೆ ಶಿಬಿರದಲ್ಲಿ ಧನಂಜಯ ಆನೆಯು ಕಂಜನ್ಗೆ ಕೊಂಬಿನಿಂದ ತಿವಿದು ಗುದ್ದಾಟ ನಡೆಸಿದೆ.
ಕಳೆದ ತಿಂಗಳು ಮೈಸೂರು ಅರಮನೆಯಲ್ಲೂ ಕೂಡ ಧನಂಜಯ ಕಂಜನ್ ಆನೆಯನ್ನು ಅಟ್ಟಾಡಿಸಿಕೊಂಡು ಹೋಗಿತ್ತು. ಪರಿಣಾಮ ಕಂಜನ್ ಆನೆ ಅರಮನೆಯಿಂದ ಹೊರಗಡೆ ಬಂದು ಜನತೆಯಲ್ಲಿ ಆತಂಕ ಸೃಷ್ಟಿಸಿತ್ತು.
ಈಗ ದಸರಾವನ್ನು ಯಶಸ್ವಿಯಾಗಿ ಮುಗಿಸಿ ಕಾಡಿನತ್ತ ಹೋದರೂ ಅಲ್ಲೂ ಕೂಡ ಧನಂಜಯ ಹಾಗೂ ಕಂಜನ್ ಆನೆಗಳು ಈ ರೀತಿ ಗುದ್ದಾಟ ನಡೆಸುತ್ತಿರುವುದು ಕಾವಾಡಿಗರು ಹಾಗೂ ಮಾವುತರಿಗೆ ಬೇಸರ ತರಿಸಿದೆ.
ಘರ್ಷಣೆ ಬಳಿಕ ಆನೆಗಳ ಆರೋಗ್ಯ ತಪಾಸಣೆ ನಡೆಸಲಾಗಿದೆ ಎನ್ನಲಾಗಿದ್ದು, ಎರಡೂ ಆನೆಗಳು ಆರೋಗ್ಯವಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…