ಕೊಡಗು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿದ್ದ ಆನೆಗಳಾದ ಧನಂಜಯ ಹಾಗೂ ಕಂಜನ್ ದುಬಾರೆ ಶಿಬಿರದಲ್ಲಿ ಗುದ್ದಾಡಿಕೊಂಡಿದ್ದು, ಮಾವುತರ ಸಮಯಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ದಸರಾಗೆ ಆಗಮಿಸಿದ್ದ ಧನಂಜಯ ಹಾಗೂ ಕಂಜನ್ ಆನೆಗಳ ಕಚ್ಚಾಟ ಮತ್ತೆ ಮುಂದುವರಿದಿದ್ದು, ದುಬಾರೆ ಆನೆ ಶಿಬಿರದಲ್ಲಿ ಧನಂಜಯ ಆನೆಯು ಕಂಜನ್ಗೆ ಕೊಂಬಿನಿಂದ ತಿವಿದು ಗುದ್ದಾಟ ನಡೆಸಿದೆ.
ಕಳೆದ ತಿಂಗಳು ಮೈಸೂರು ಅರಮನೆಯಲ್ಲೂ ಕೂಡ ಧನಂಜಯ ಕಂಜನ್ ಆನೆಯನ್ನು ಅಟ್ಟಾಡಿಸಿಕೊಂಡು ಹೋಗಿತ್ತು. ಪರಿಣಾಮ ಕಂಜನ್ ಆನೆ ಅರಮನೆಯಿಂದ ಹೊರಗಡೆ ಬಂದು ಜನತೆಯಲ್ಲಿ ಆತಂಕ ಸೃಷ್ಟಿಸಿತ್ತು.
ಈಗ ದಸರಾವನ್ನು ಯಶಸ್ವಿಯಾಗಿ ಮುಗಿಸಿ ಕಾಡಿನತ್ತ ಹೋದರೂ ಅಲ್ಲೂ ಕೂಡ ಧನಂಜಯ ಹಾಗೂ ಕಂಜನ್ ಆನೆಗಳು ಈ ರೀತಿ ಗುದ್ದಾಟ ನಡೆಸುತ್ತಿರುವುದು ಕಾವಾಡಿಗರು ಹಾಗೂ ಮಾವುತರಿಗೆ ಬೇಸರ ತರಿಸಿದೆ.
ಘರ್ಷಣೆ ಬಳಿಕ ಆನೆಗಳ ಆರೋಗ್ಯ ತಪಾಸಣೆ ನಡೆಸಲಾಗಿದೆ ಎನ್ನಲಾಗಿದ್ದು, ಎರಡೂ ಆನೆಗಳು ಆರೋಗ್ಯವಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…