The confluence of the Kaveri and Kapila at the Triveni Sangam
ಕೊಡಗು: ನದಿ ಅಥವಾ ಹಿನ್ನೀರಿನಲ್ಲಿ ಈಜಲು ಇಳಿಯಬೇಡಿ ಎಂದು ಕುಶಾಲನಗರ ಅಗ್ನಿಶಾಮಕ ಠಾಣೆಯು ಪ್ರಕಟಣೆ ಹೊರಡಿಸಿದ್ದು, ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.
ಕೊಡಗು, ಮಡಿಕೇರಿ, ಕುಶಾಲನಗರ ಸೇರಿದಂತೆ ಜಿಲ್ಲೆಯಲ್ಲಿ ಕಾವೇರಿ ನದಿ ಹರಿಯುವಿಕೆಯ ಪ್ರಮಾಣ ಹೆಚ್ಚಾಗಿದೆ. ಈ ಬೇಸಿಗೆಯಲ್ಲಿ ಶಾಲಾ ಮಕ್ಕಳು ಹಾಗೂ ಕಾಲೇಜು ವಿದ್ಯಾರ್ಥಿಗಳು ಮತ್ತು ಸ್ಥಳೀಯರು ನದಿಯಲ್ಲಿ ಈಜಲು ತೆರಳುವುದರಿಂದ ನದಿಯಲ್ಲಿ ಮುಳುಗಿ ಮೃತಪಡುತ್ತಿರುವುದು ನಿಜಕ್ಕೂ ದೌರ್ಭಾಗ್ಯ.
ಆದರೆ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಇರುವುದರಿಂದ ಹೆಚ್ಚಿನ ವಿದ್ಯಾರ್ಥಿಗಳು ಕಾವೇರಿ ನದಿಯಲ್ಲಿ ಹಾಗೂ ಹಿನ್ನೀರಿನಲ್ಲಿ ಈಜಲು ತೆರಳಬೇಡಿ. ನದಿಯ ಆಳ ಮತ್ತು ನದಿ ಹರಿಯುವಿಕೆ ಪ್ರಮಾಣ ನಿಮಗೆ ತಿಳಿದಿರುವುದಿಲ್ಲ. ಸಾಮಾನ್ಯವಾಗಿ ನೀರಿನಲ್ಲಿ ಈಜುತ್ತಿದ್ದಾಗ ಆಳ ಪ್ರದೇಶಕ್ಕೆ ಜಾರುವುದರಿಂದ ಭಯ ಉಂಟಾಗಿ ಮತ್ತು ಉಸಿರಾಟದ ಸಮಸ್ಯೆಯಿಂದ ಹಾಗೂ ಮುಂದೆ ಏನು ಮಾಡಬೇಕೆಂದು ತಿಳಿಯದೆ ಉಸಿರು ಚೆಲ್ಲುತ್ತಿದ್ದಾರೆ.
ಹಾಗಾಗಿ ಯಾವುದೇ ವಿದ್ಯಾರ್ಥಿಗಳು, ಯುವಕರು ಹಾಗೂ ಸ್ಥಳೀಯರು ನೀರಿನಲ್ಲಿ ಇಳಿಯಬಾರದು ಎಂದು ಸೂಚನೆ ನೀಡಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…