ಕೊಡಗು: ಕರ್ನಾಟಕದಲ್ಲಿ ಮುಂಗಾರು ಮಳೆಯಿಂದಾಗಿ ಚಿಕ್ಕಪುಟ್ಟ ಜಲಾಶಯಗಳಿಗೂ ಜೀವ ಕಳೆ ಬಂದಿದೆ. ಕೊಡಗಿನ ಚಿಕ್ಲಿಹೊಳೆ ಕೂಡ ಅದರಲ್ಲಿ ಒಂದಾಗಿದೆ.
ಕಾವೇರಿ ಕಣಿವೆಯ ಚಿಕ್ಕ ಜಲಾಶಯಗಳಲ್ಲಿ ಒಂದಾಗಿರುವ ಕೊಡಗಿನ ಕುಶಾಲನಗರ ತಾಲ್ಲೂಕಿನ ಚಿಕ್ಲಿಹೊಳೆ ಅಣೆಕಟ್ಟೆ ಭರ್ತಿಯಾಗಿದೆ. ಸೋಮವಾರಪೇಟೆ, ಕುಶಾಲನಗರ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದ್ದರಿಂದ ಜಲಾಶಯ ಹಸಿರು ಹಾಗೂ ನೀರಿನಿಂದ ಕಂಗೊಳಿಸುತ್ತಿದೆ.
ಈ ಬಾರಿಯ ಬೇಸಿಗೆ ಅವಧಿಯಲ್ಲಿ ಖಾಲಿ ಜಲಾಶಯ ಕಂಡು ಬೇಸರದಿಂದಲೇ ಹಿಂದಿರುಗುತ್ತಿದ್ದ ಪ್ರವಾಸಿಗರಿಗೆ ಈಗ ಮಳೆರಾಯನ ಕೃಪೆಯಿಂದ ಆಹ್ಲಾದಕರ ವಾತಾವರಣ ಉಂಟಾಗಿದೆ.
ವಿಶೇಷ ವಿನ್ಯಾಸದಲ್ಲಿ ನಿರ್ಮಿಸಿರುವ ಈ ಅಣೆಕಟ್ಟೆ ತುಂಬಿದಾಗ ಅರ್ಧಚಂದ್ರಾಕೃತಿ ಕಟ್ಟೆಯ ಮುಖಾಂತರ ನೀರು ಹೊರಬೀಳುವ ದೃಶ್ಯ ಆಕರ್ಷಕವಾಗಿರುತ್ತದೆ. ಈಗಲೂ ಅಂತಹ ಸನ್ನಿವೇಶ ನಿರ್ಮಾಣವಾಗಿದೆ.
ಕುಶಾಲನಗರ ತಾಲ್ಲೂಕಿನ ರಂಗಸಮುದ್ರದಲ್ಲಿ ಇರುವ ಚಿಕ್ಲಿಹೊಳೆ ಜಲಾಶಯ ನಿರ್ಮಾಣ ಶುರುವಾಗಿದ್ದು ಎಪ್ಪತ್ತರ ದಶಕದ ಅಂತ್ಯದಲ್ಲಿ. ಮುಗಿದಿದ್ದು ಎಂಬತ್ತರ ದಶಕದ ಆರಂಭದಲ್ಲಿ. ನಾಲ್ಕು ದಶಕದಿಂದ ಈ ಜಲಾಶಯ ಬಳಕೆಯಲ್ಲಿದೆ.
ಅರ್ಧ ಟಿಎಂಸಿ ನೀರು ಸಂಗ್ರಹಿಸಬಹುದಾದ ಚಿಕ್ಲಿಹೊಳೆ ತುಂಬಿದಾಗ ಹೊರಹರಿಯುವ ನೀರು ಕಾವೇರಿ ನದಿಯನ್ನು ಸೇರುತ್ತದೆ. ಇದನ್ನು ನೋಡುವುದೇ ಆನಂದದಾಯಕ.
ಈ ಬಾರಿ ಜುಲೈ ಮೊದಲ ವಾರದಲ್ಲಿ ತುಂಬಿದ ಚಿಕ್ಲಿಹೊಳೆಗೆ ಮಡಿಕೇರಿ ಶಾಸಕ ಮಂಥರ್ ಗೌಡ ಅವರು ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…