ಕೊಡಗು

ಕೊಡಗು ಜಿಲ್ಲೆಯಲ್ಲಿ ಕಳೆಗಟ್ಟಿದ ಚಿಕ್ಲಿಹೊಳೆ, ಜಲವೈಭವ ಹೇಗಿದೆ ಗೊತ್ತಾ.?

ಕೊಡಗು: ಕರ್ನಾಟಕದಲ್ಲಿ ಮುಂಗಾರು ಮಳೆಯಿಂದಾಗಿ ಚಿಕ್ಕಪುಟ್ಟ ಜಲಾಶಯಗಳಿಗೂ ಜೀವ ಕಳೆ ಬಂದಿದೆ. ಕೊಡಗಿನ ಚಿಕ್ಲಿಹೊಳೆ ಕೂಡ ಅದರಲ್ಲಿ ಒಂದಾಗಿದೆ.

ಕಾವೇರಿ ಕಣಿವೆಯ ಚಿಕ್ಕ ಜಲಾಶಯಗಳಲ್ಲಿ ಒಂದಾಗಿರುವ ಕೊಡಗಿನ ಕುಶಾಲನಗರ ತಾಲ್ಲೂಕಿನ ಚಿಕ್ಲಿಹೊಳೆ ಅಣೆಕಟ್ಟೆ ಭರ್ತಿಯಾಗಿದೆ. ಸೋಮವಾರಪೇಟೆ, ಕುಶಾಲನಗರ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದ್ದರಿಂದ ಜಲಾಶಯ ಹಸಿರು ಹಾಗೂ ನೀರಿನಿಂದ ಕಂಗೊಳಿಸುತ್ತಿದೆ.

ಈ ಬಾರಿಯ ಬೇಸಿಗೆ ಅವಧಿಯಲ್ಲಿ ಖಾಲಿ ಜಲಾಶಯ ಕಂಡು ಬೇಸರದಿಂದಲೇ ಹಿಂದಿರುಗುತ್ತಿದ್ದ ಪ್ರವಾಸಿಗರಿಗೆ ಈಗ ಮಳೆರಾಯನ ಕೃಪೆಯಿಂದ ಆಹ್ಲಾದಕರ ವಾತಾವರಣ ಉಂಟಾಗಿದೆ.

ವಿಶೇಷ ವಿನ್ಯಾಸದಲ್ಲಿ ನಿರ್ಮಿಸಿರುವ ಈ ಅಣೆಕಟ್ಟೆ ತುಂಬಿದಾಗ ಅರ್ಧಚಂದ್ರಾಕೃತಿ ಕಟ್ಟೆಯ ಮುಖಾಂತರ ನೀರು ಹೊರಬೀಳುವ ದೃಶ್ಯ ಆಕರ್ಷಕವಾಗಿರುತ್ತದೆ. ಈಗಲೂ ಅಂತಹ ಸನ್ನಿವೇಶ ನಿರ್ಮಾಣವಾಗಿದೆ.

ಕುಶಾಲನಗರ ತಾಲ್ಲೂಕಿನ ರಂಗಸಮುದ್ರದಲ್ಲಿ ಇರುವ ಚಿಕ್ಲಿಹೊಳೆ ಜಲಾಶಯ ನಿರ್ಮಾಣ ಶುರುವಾಗಿದ್ದು ಎಪ್ಪತ್ತರ ದಶಕದ ಅಂತ್ಯದಲ್ಲಿ. ಮುಗಿದಿದ್ದು ಎಂಬತ್ತರ ದಶಕದ ಆರಂಭದಲ್ಲಿ. ನಾಲ್ಕು ದಶಕದಿಂದ ಈ ಜಲಾಶಯ ಬಳಕೆಯಲ್ಲಿದೆ.

ಅರ್ಧ ಟಿಎಂಸಿ ನೀರು ಸಂಗ್ರಹಿಸಬಹುದಾದ ಚಿಕ್ಲಿಹೊಳೆ ತುಂಬಿದಾಗ ಹೊರಹರಿಯುವ ನೀರು ಕಾವೇರಿ ನದಿಯನ್ನು ಸೇರುತ್ತದೆ. ಇದನ್ನು ನೋಡುವುದೇ ಆನಂದದಾಯಕ.

ಈ ಬಾರಿ ಜುಲೈ ಮೊದಲ ವಾರದಲ್ಲಿ ತುಂಬಿದ ಚಿಕ್ಲಿಹೊಳೆಗೆ ಮಡಿಕೇರಿ ಶಾಸಕ ಮಂಥರ್‌ ಗೌಡ ಅವರು ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago