ಕೊಡಗು: ಕರ್ನಾಟಕದಲ್ಲಿ ಮುಂಗಾರು ಮಳೆಯಿಂದಾಗಿ ಚಿಕ್ಕಪುಟ್ಟ ಜಲಾಶಯಗಳಿಗೂ ಜೀವ ಕಳೆ ಬಂದಿದೆ. ಕೊಡಗಿನ ಚಿಕ್ಲಿಹೊಳೆ ಕೂಡ ಅದರಲ್ಲಿ ಒಂದಾಗಿದೆ.
ಕಾವೇರಿ ಕಣಿವೆಯ ಚಿಕ್ಕ ಜಲಾಶಯಗಳಲ್ಲಿ ಒಂದಾಗಿರುವ ಕೊಡಗಿನ ಕುಶಾಲನಗರ ತಾಲ್ಲೂಕಿನ ಚಿಕ್ಲಿಹೊಳೆ ಅಣೆಕಟ್ಟೆ ಭರ್ತಿಯಾಗಿದೆ. ಸೋಮವಾರಪೇಟೆ, ಕುಶಾಲನಗರ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದ್ದರಿಂದ ಜಲಾಶಯ ಹಸಿರು ಹಾಗೂ ನೀರಿನಿಂದ ಕಂಗೊಳಿಸುತ್ತಿದೆ.
ಈ ಬಾರಿಯ ಬೇಸಿಗೆ ಅವಧಿಯಲ್ಲಿ ಖಾಲಿ ಜಲಾಶಯ ಕಂಡು ಬೇಸರದಿಂದಲೇ ಹಿಂದಿರುಗುತ್ತಿದ್ದ ಪ್ರವಾಸಿಗರಿಗೆ ಈಗ ಮಳೆರಾಯನ ಕೃಪೆಯಿಂದ ಆಹ್ಲಾದಕರ ವಾತಾವರಣ ಉಂಟಾಗಿದೆ.
ವಿಶೇಷ ವಿನ್ಯಾಸದಲ್ಲಿ ನಿರ್ಮಿಸಿರುವ ಈ ಅಣೆಕಟ್ಟೆ ತುಂಬಿದಾಗ ಅರ್ಧಚಂದ್ರಾಕೃತಿ ಕಟ್ಟೆಯ ಮುಖಾಂತರ ನೀರು ಹೊರಬೀಳುವ ದೃಶ್ಯ ಆಕರ್ಷಕವಾಗಿರುತ್ತದೆ. ಈಗಲೂ ಅಂತಹ ಸನ್ನಿವೇಶ ನಿರ್ಮಾಣವಾಗಿದೆ.
ಕುಶಾಲನಗರ ತಾಲ್ಲೂಕಿನ ರಂಗಸಮುದ್ರದಲ್ಲಿ ಇರುವ ಚಿಕ್ಲಿಹೊಳೆ ಜಲಾಶಯ ನಿರ್ಮಾಣ ಶುರುವಾಗಿದ್ದು ಎಪ್ಪತ್ತರ ದಶಕದ ಅಂತ್ಯದಲ್ಲಿ. ಮುಗಿದಿದ್ದು ಎಂಬತ್ತರ ದಶಕದ ಆರಂಭದಲ್ಲಿ. ನಾಲ್ಕು ದಶಕದಿಂದ ಈ ಜಲಾಶಯ ಬಳಕೆಯಲ್ಲಿದೆ.
ಅರ್ಧ ಟಿಎಂಸಿ ನೀರು ಸಂಗ್ರಹಿಸಬಹುದಾದ ಚಿಕ್ಲಿಹೊಳೆ ತುಂಬಿದಾಗ ಹೊರಹರಿಯುವ ನೀರು ಕಾವೇರಿ ನದಿಯನ್ನು ಸೇರುತ್ತದೆ. ಇದನ್ನು ನೋಡುವುದೇ ಆನಂದದಾಯಕ.
ಈ ಬಾರಿ ಜುಲೈ ಮೊದಲ ವಾರದಲ್ಲಿ ತುಂಬಿದ ಚಿಕ್ಲಿಹೊಳೆಗೆ ಮಡಿಕೇರಿ ಶಾಸಕ ಮಂಥರ್ ಗೌಡ ಅವರು ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.
ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…
ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…