ಕೊಡಗು: ಕರ್ನಾಟಕದಲ್ಲಿ ಮುಂಗಾರು ಮಳೆಯಿಂದಾಗಿ ಚಿಕ್ಕಪುಟ್ಟ ಜಲಾಶಯಗಳಿಗೂ ಜೀವ ಕಳೆ ಬಂದಿದೆ. ಕೊಡಗಿನ ಚಿಕ್ಲಿಹೊಳೆ ಕೂಡ ಅದರಲ್ಲಿ ಒಂದಾಗಿದೆ.
ಕಾವೇರಿ ಕಣಿವೆಯ ಚಿಕ್ಕ ಜಲಾಶಯಗಳಲ್ಲಿ ಒಂದಾಗಿರುವ ಕೊಡಗಿನ ಕುಶಾಲನಗರ ತಾಲ್ಲೂಕಿನ ಚಿಕ್ಲಿಹೊಳೆ ಅಣೆಕಟ್ಟೆ ಭರ್ತಿಯಾಗಿದೆ. ಸೋಮವಾರಪೇಟೆ, ಕುಶಾಲನಗರ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದ್ದರಿಂದ ಜಲಾಶಯ ಹಸಿರು ಹಾಗೂ ನೀರಿನಿಂದ ಕಂಗೊಳಿಸುತ್ತಿದೆ.
ಈ ಬಾರಿಯ ಬೇಸಿಗೆ ಅವಧಿಯಲ್ಲಿ ಖಾಲಿ ಜಲಾಶಯ ಕಂಡು ಬೇಸರದಿಂದಲೇ ಹಿಂದಿರುಗುತ್ತಿದ್ದ ಪ್ರವಾಸಿಗರಿಗೆ ಈಗ ಮಳೆರಾಯನ ಕೃಪೆಯಿಂದ ಆಹ್ಲಾದಕರ ವಾತಾವರಣ ಉಂಟಾಗಿದೆ.
ವಿಶೇಷ ವಿನ್ಯಾಸದಲ್ಲಿ ನಿರ್ಮಿಸಿರುವ ಈ ಅಣೆಕಟ್ಟೆ ತುಂಬಿದಾಗ ಅರ್ಧಚಂದ್ರಾಕೃತಿ ಕಟ್ಟೆಯ ಮುಖಾಂತರ ನೀರು ಹೊರಬೀಳುವ ದೃಶ್ಯ ಆಕರ್ಷಕವಾಗಿರುತ್ತದೆ. ಈಗಲೂ ಅಂತಹ ಸನ್ನಿವೇಶ ನಿರ್ಮಾಣವಾಗಿದೆ.
ಕುಶಾಲನಗರ ತಾಲ್ಲೂಕಿನ ರಂಗಸಮುದ್ರದಲ್ಲಿ ಇರುವ ಚಿಕ್ಲಿಹೊಳೆ ಜಲಾಶಯ ನಿರ್ಮಾಣ ಶುರುವಾಗಿದ್ದು ಎಪ್ಪತ್ತರ ದಶಕದ ಅಂತ್ಯದಲ್ಲಿ. ಮುಗಿದಿದ್ದು ಎಂಬತ್ತರ ದಶಕದ ಆರಂಭದಲ್ಲಿ. ನಾಲ್ಕು ದಶಕದಿಂದ ಈ ಜಲಾಶಯ ಬಳಕೆಯಲ್ಲಿದೆ.
ಅರ್ಧ ಟಿಎಂಸಿ ನೀರು ಸಂಗ್ರಹಿಸಬಹುದಾದ ಚಿಕ್ಲಿಹೊಳೆ ತುಂಬಿದಾಗ ಹೊರಹರಿಯುವ ನೀರು ಕಾವೇರಿ ನದಿಯನ್ನು ಸೇರುತ್ತದೆ. ಇದನ್ನು ನೋಡುವುದೇ ಆನಂದದಾಯಕ.
ಈ ಬಾರಿ ಜುಲೈ ಮೊದಲ ವಾರದಲ್ಲಿ ತುಂಬಿದ ಚಿಕ್ಲಿಹೊಳೆಗೆ ಮಡಿಕೇರಿ ಶಾಸಕ ಮಂಥರ್ ಗೌಡ ಅವರು ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…