ಕೊಡಗು: ಕರ್ನಾಟಕದಲ್ಲಿ ಮುಂಗಾರು ಮಳೆಯಿಂದಾಗಿ ಚಿಕ್ಕಪುಟ್ಟ ಜಲಾಶಯಗಳಿಗೂ ಜೀವ ಕಳೆ ಬಂದಿದೆ. ಕೊಡಗಿನ ಚಿಕ್ಲಿಹೊಳೆ ಕೂಡ ಅದರಲ್ಲಿ ಒಂದಾಗಿದೆ.
ಕಾವೇರಿ ಕಣಿವೆಯ ಚಿಕ್ಕ ಜಲಾಶಯಗಳಲ್ಲಿ ಒಂದಾಗಿರುವ ಕೊಡಗಿನ ಕುಶಾಲನಗರ ತಾಲ್ಲೂಕಿನ ಚಿಕ್ಲಿಹೊಳೆ ಅಣೆಕಟ್ಟೆ ಭರ್ತಿಯಾಗಿದೆ. ಸೋಮವಾರಪೇಟೆ, ಕುಶಾಲನಗರ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದ್ದರಿಂದ ಜಲಾಶಯ ಹಸಿರು ಹಾಗೂ ನೀರಿನಿಂದ ಕಂಗೊಳಿಸುತ್ತಿದೆ.
ಈ ಬಾರಿಯ ಬೇಸಿಗೆ ಅವಧಿಯಲ್ಲಿ ಖಾಲಿ ಜಲಾಶಯ ಕಂಡು ಬೇಸರದಿಂದಲೇ ಹಿಂದಿರುಗುತ್ತಿದ್ದ ಪ್ರವಾಸಿಗರಿಗೆ ಈಗ ಮಳೆರಾಯನ ಕೃಪೆಯಿಂದ ಆಹ್ಲಾದಕರ ವಾತಾವರಣ ಉಂಟಾಗಿದೆ.
ವಿಶೇಷ ವಿನ್ಯಾಸದಲ್ಲಿ ನಿರ್ಮಿಸಿರುವ ಈ ಅಣೆಕಟ್ಟೆ ತುಂಬಿದಾಗ ಅರ್ಧಚಂದ್ರಾಕೃತಿ ಕಟ್ಟೆಯ ಮುಖಾಂತರ ನೀರು ಹೊರಬೀಳುವ ದೃಶ್ಯ ಆಕರ್ಷಕವಾಗಿರುತ್ತದೆ. ಈಗಲೂ ಅಂತಹ ಸನ್ನಿವೇಶ ನಿರ್ಮಾಣವಾಗಿದೆ.
ಕುಶಾಲನಗರ ತಾಲ್ಲೂಕಿನ ರಂಗಸಮುದ್ರದಲ್ಲಿ ಇರುವ ಚಿಕ್ಲಿಹೊಳೆ ಜಲಾಶಯ ನಿರ್ಮಾಣ ಶುರುವಾಗಿದ್ದು ಎಪ್ಪತ್ತರ ದಶಕದ ಅಂತ್ಯದಲ್ಲಿ. ಮುಗಿದಿದ್ದು ಎಂಬತ್ತರ ದಶಕದ ಆರಂಭದಲ್ಲಿ. ನಾಲ್ಕು ದಶಕದಿಂದ ಈ ಜಲಾಶಯ ಬಳಕೆಯಲ್ಲಿದೆ.
ಅರ್ಧ ಟಿಎಂಸಿ ನೀರು ಸಂಗ್ರಹಿಸಬಹುದಾದ ಚಿಕ್ಲಿಹೊಳೆ ತುಂಬಿದಾಗ ಹೊರಹರಿಯುವ ನೀರು ಕಾವೇರಿ ನದಿಯನ್ನು ಸೇರುತ್ತದೆ. ಇದನ್ನು ನೋಡುವುದೇ ಆನಂದದಾಯಕ.
ಈ ಬಾರಿ ಜುಲೈ ಮೊದಲ ವಾರದಲ್ಲಿ ತುಂಬಿದ ಚಿಕ್ಲಿಹೊಳೆಗೆ ಮಡಿಕೇರಿ ಶಾಸಕ ಮಂಥರ್ ಗೌಡ ಅವರು ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…