ಕೊಡಗು: ಕರ್ನಾಟಕದಲ್ಲಿ ಮುಂಗಾರು ಮಳೆಯಿಂದಾಗಿ ಚಿಕ್ಕಪುಟ್ಟ ಜಲಾಶಯಗಳಿಗೂ ಜೀವ ಕಳೆ ಬಂದಿದೆ. ಕೊಡಗಿನ ಚಿಕ್ಲಿಹೊಳೆ ಕೂಡ ಅದರಲ್ಲಿ ಒಂದಾಗಿದೆ.
ಕಾವೇರಿ ಕಣಿವೆಯ ಚಿಕ್ಕ ಜಲಾಶಯಗಳಲ್ಲಿ ಒಂದಾಗಿರುವ ಕೊಡಗಿನ ಕುಶಾಲನಗರ ತಾಲ್ಲೂಕಿನ ಚಿಕ್ಲಿಹೊಳೆ ಅಣೆಕಟ್ಟೆ ಭರ್ತಿಯಾಗಿದೆ. ಸೋಮವಾರಪೇಟೆ, ಕುಶಾಲನಗರ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದ್ದರಿಂದ ಜಲಾಶಯ ಹಸಿರು ಹಾಗೂ ನೀರಿನಿಂದ ಕಂಗೊಳಿಸುತ್ತಿದೆ.
ಈ ಬಾರಿಯ ಬೇಸಿಗೆ ಅವಧಿಯಲ್ಲಿ ಖಾಲಿ ಜಲಾಶಯ ಕಂಡು ಬೇಸರದಿಂದಲೇ ಹಿಂದಿರುಗುತ್ತಿದ್ದ ಪ್ರವಾಸಿಗರಿಗೆ ಈಗ ಮಳೆರಾಯನ ಕೃಪೆಯಿಂದ ಆಹ್ಲಾದಕರ ವಾತಾವರಣ ಉಂಟಾಗಿದೆ.
ವಿಶೇಷ ವಿನ್ಯಾಸದಲ್ಲಿ ನಿರ್ಮಿಸಿರುವ ಈ ಅಣೆಕಟ್ಟೆ ತುಂಬಿದಾಗ ಅರ್ಧಚಂದ್ರಾಕೃತಿ ಕಟ್ಟೆಯ ಮುಖಾಂತರ ನೀರು ಹೊರಬೀಳುವ ದೃಶ್ಯ ಆಕರ್ಷಕವಾಗಿರುತ್ತದೆ. ಈಗಲೂ ಅಂತಹ ಸನ್ನಿವೇಶ ನಿರ್ಮಾಣವಾಗಿದೆ.
ಕುಶಾಲನಗರ ತಾಲ್ಲೂಕಿನ ರಂಗಸಮುದ್ರದಲ್ಲಿ ಇರುವ ಚಿಕ್ಲಿಹೊಳೆ ಜಲಾಶಯ ನಿರ್ಮಾಣ ಶುರುವಾಗಿದ್ದು ಎಪ್ಪತ್ತರ ದಶಕದ ಅಂತ್ಯದಲ್ಲಿ. ಮುಗಿದಿದ್ದು ಎಂಬತ್ತರ ದಶಕದ ಆರಂಭದಲ್ಲಿ. ನಾಲ್ಕು ದಶಕದಿಂದ ಈ ಜಲಾಶಯ ಬಳಕೆಯಲ್ಲಿದೆ.
ಅರ್ಧ ಟಿಎಂಸಿ ನೀರು ಸಂಗ್ರಹಿಸಬಹುದಾದ ಚಿಕ್ಲಿಹೊಳೆ ತುಂಬಿದಾಗ ಹೊರಹರಿಯುವ ನೀರು ಕಾವೇರಿ ನದಿಯನ್ನು ಸೇರುತ್ತದೆ. ಇದನ್ನು ನೋಡುವುದೇ ಆನಂದದಾಯಕ.
ಈ ಬಾರಿ ಜುಲೈ ಮೊದಲ ವಾರದಲ್ಲಿ ತುಂಬಿದ ಚಿಕ್ಲಿಹೊಳೆಗೆ ಮಡಿಕೇರಿ ಶಾಸಕ ಮಂಥರ್ ಗೌಡ ಅವರು ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…