ಕೊಡಗು

ಗಾಂಜಾ ಮಾರಾಟ: ಆರೋಪಿಗಳ ಬಂಧನ

ಮಡಿಕೇರಿ: ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಯಡವನಾಡು ಗ್ರಾಮದ ನಿವಾಸಿ ಸಮರ್ಥ್ ಅರಸ್, ಕೂಡಮಂಗಳೂರು ಗ್ರಾಮದ ನಿವಾಸಿ ಮಹಮ್ಮದ್ ಅಫ್ರೀನ್ ಎಂಬುವವರೇ ಬಂಧಿತ ಆರೋಪಿಗಳು.
ಶನಿವಾರ ಬಸವನತ್ತೂರು ಗ್ರಾಮದ ಸರ್ಕಾರಿ ಶಾಲೆಯ ರಸ್ತೆಯಲ್ಲಿ ನಿಷೇಧಿತ ಮಾದಕ ವಸ್ತುವನ್ನು ಸರಬರಾಜು, ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತರಿಂದ ೮೦ ಗ್ರಾಂ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಸೋಮವಾರಪೇಟೆ ಉಪವಿಭಾಗ ಡಿಎಸ್‌ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ವೃತ್ತ ಸಿಪಿಐ ರಾಜೇಶ್.ಕೆ, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್‌ಐ ಮೋಹನ್‌ರಾಜು.ಪಿ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಹನೂರು: ಪಾದಯಾತ್ರಿಕರು ಬಿಸಾಡುವ ಕಸ ಸಂಗ್ರಹಣೆ ಡಬ್ಬ ನಿರ್ಮಾಣ ಕಾಮಗಾರಿಗೆ ಚಾಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…

12 mins ago

ಕೇಂದ್ರ ಬಜೆಟ್‌ಗೆ ರಾಜ್ಯ ಬಿಜೆಪಿ ನಾಯಕರ ಮೆಚ್ಚುಗೆ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…

17 mins ago

ಮಂಡ್ಯ| ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ‌: ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…

1 hour ago

ಬಜೆಟ್‌ ದೇಶದ ಅಭಿವೃದ್ಧಿಗೆ ಹೊಸ ಸ್ಪರ್ಶ ತುಂಬಲಿದೆ: ಪ್ರಧಾನಿ ಮೋದಿ

ನವದೆಹಲಿ: 2026ರ ಬಜೆಟ್‌ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು…

1 hour ago

ಬಜೆಟ್‌ನಲ್ಲಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಕ್ಕೆ ಮತ್ತೆ ಅನ್ಯಾಯ: ಈಶ್ವರ ಖಂಡ್ರೆ

ಬೆಂಗಳೂರು: ಭಾನುವಾರ ಮಂಡಿಸಲಾದ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ರಜೆ ನೀಡುವಂತಿದೆ. ಸಂಪೂರ್ಣ ನಿರಾಶಾದಾಯಕವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು…

1 hour ago

ಕೇಂದ್ರ ಬಜೆಟ್:‌ ಯಾವ ವಸ್ತುಗಳ ದರ ಏರಿಕೆ? ಯಾವುದು ಇಳಿಕೆ?

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಸಭೆಯಲ್ಲಿ ಇಂದು 2026-27ನೇ ಕೇಂದ್ರ ಬಜೆಟ್‌ ಮಂಡನೆ ಮಾಡಿದ್ದಾರೆ. ಬಜೆಟ್‌ನಲ್ಲಿ…

2 hours ago