Mysore
30
scattered clouds

Social Media

ಭಾನುವಾರ, 22 ಮಾರ್ಚ್ 2026
Light
Dark

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ.

ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ ಆನೆಯು ಅನಾರೋಗ್ಯದಿಂದ ಸಾವನಪ್ಪಿದೆ. ತಕ್ಷ ಆನೆಯನ್ನು ೨೦೨೪ರ ಡಿ.೨೮ರಂದು ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಸೆರಹಿಡಿದು ದುಬಾರೆ ಸಾಕಾನೆ ಶಿಬಿರಕ್ಕೆ ಕರೆತರಲಾಗಿತ್ತು. ಕಳೆದ ಜು.೨೧ರಂದು ಎಲ್ಲಾ ರೀತಿಯ ತರಬೇತಿ ನೀಡಿ ಕ್ರಾಲ್‌ನಿಂದ ಹೊರಗೆ ಬಿಡಲಾಗಿತ್ತು.

ಕಳೆದ ೧೦ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತಕ್ಷ ಆನೆಯ ಆರೋಗ್ಯದಲ್ಲಿ ಡಿ.೬ರಿಂದ ತೀವ್ರ ವ್ಯತ್ಯಾಸ ಕಂಡುಬಂದಿತ್ತು. ವೈದ್ಯಾಧಿಕಾರಿ ಡಾ. ಮುಜೀಬ್ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ ಕೊನೆಯುಸಿರೆಳೆದಿದೆ.

ಮಂಗಳವಾರ ಕೊಡಗು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಸೋನಲ್ ವಿಷ್ಟಿ ಉಪಸ್ಥಿತಿಯಲ್ಲಿ ಪಶು ವೈದ್ಯಾಧಿಕಾರಿಗಳಾದ ಡಾ. ಮುಜೀಬ್, ಡಾ. ಚಿಟ್ಟಿಯಪ್ಪ ಹಾಗೂ ಡಾ. ಸಂಜೀವ್ ಕುಮಾರ್ ಸಿಂಧೆ ಇವರಿಂದ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಆನೆಯ ಸ್ಯಾಂಪಲ್ಸ್‌ಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಮಡಿಕೇರಿ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ. ಅಭಿಷೇಕ್, ಸೋಮವಾರಪೇಟೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ಎ. ಗೋಪಾಲ್, ಕುಶಾಲನಗರ ವಲಯ ಅರಣ್ಯಾಧಿಕಾರಿ ಆರ್. ರಕ್ಷಿತ್, ದುಬಾರೆ ಕ್ಯಾಂಪಿನ ಉಪ ವಲಯ ಅರಣ್ಯಾಧಿಕಾರಿ ಕೆ.ಪಿ. ರಂಜನ್, ದುಬಾರೆ ಶಾಖಾ ಉಪ ವಲಯ ಅರಣ್ಯಾಧಿಕಾರಿ ವೆಂಕಟೇಶ್ ನಲವಾಡಿ ಹಾಗೂ ಸಿಬ್ಬಂದಿ ಈ ಸಂದರ್ಭದಲ್ಲಿ ಹಾಜರಿದ್ದರು.

 

 

 

Tags:
error: Content is protected !!