ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ.
ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ ಆನೆಯು ಅನಾರೋಗ್ಯದಿಂದ ಸಾವನಪ್ಪಿದೆ. ತಕ್ಷ ಆನೆಯನ್ನು ೨೦೨೪ರ ಡಿ.೨೮ರಂದು ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಸೆರಹಿಡಿದು ದುಬಾರೆ ಸಾಕಾನೆ ಶಿಬಿರಕ್ಕೆ ಕರೆತರಲಾಗಿತ್ತು. ಕಳೆದ ಜು.೨೧ರಂದು ಎಲ್ಲಾ ರೀತಿಯ ತರಬೇತಿ ನೀಡಿ ಕ್ರಾಲ್ನಿಂದ ಹೊರಗೆ ಬಿಡಲಾಗಿತ್ತು.
ಕಳೆದ ೧೦ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತಕ್ಷ ಆನೆಯ ಆರೋಗ್ಯದಲ್ಲಿ ಡಿ.೬ರಿಂದ ತೀವ್ರ ವ್ಯತ್ಯಾಸ ಕಂಡುಬಂದಿತ್ತು. ವೈದ್ಯಾಧಿಕಾರಿ ಡಾ. ಮುಜೀಬ್ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ ಕೊನೆಯುಸಿರೆಳೆದಿದೆ.
ಮಂಗಳವಾರ ಕೊಡಗು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಸೋನಲ್ ವಿಷ್ಟಿ ಉಪಸ್ಥಿತಿಯಲ್ಲಿ ಪಶು ವೈದ್ಯಾಧಿಕಾರಿಗಳಾದ ಡಾ. ಮುಜೀಬ್, ಡಾ. ಚಿಟ್ಟಿಯಪ್ಪ ಹಾಗೂ ಡಾ. ಸಂಜೀವ್ ಕುಮಾರ್ ಸಿಂಧೆ ಇವರಿಂದ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಆನೆಯ ಸ್ಯಾಂಪಲ್ಸ್ಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಮಡಿಕೇರಿ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ. ಅಭಿಷೇಕ್, ಸೋಮವಾರಪೇಟೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ಎ. ಗೋಪಾಲ್, ಕುಶಾಲನಗರ ವಲಯ ಅರಣ್ಯಾಧಿಕಾರಿ ಆರ್. ರಕ್ಷಿತ್, ದುಬಾರೆ ಕ್ಯಾಂಪಿನ ಉಪ ವಲಯ ಅರಣ್ಯಾಧಿಕಾರಿ ಕೆ.ಪಿ. ರಂಜನ್, ದುಬಾರೆ ಶಾಖಾ ಉಪ ವಲಯ ಅರಣ್ಯಾಧಿಕಾರಿ ವೆಂಕಟೇಶ್ ನಲವಾಡಿ ಹಾಗೂ ಸಿಬ್ಬಂದಿ ಈ ಸಂದರ್ಭದಲ್ಲಿ ಹಾಜರಿದ್ದರು.
ಹುಣಸೂರು: ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿ…
ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು…
ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…
ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…