ಕೊಡಗು

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ.

ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ ಆನೆಯು ಅನಾರೋಗ್ಯದಿಂದ ಸಾವನಪ್ಪಿದೆ. ತಕ್ಷ ಆನೆಯನ್ನು ೨೦೨೪ರ ಡಿ.೨೮ರಂದು ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಸೆರಹಿಡಿದು ದುಬಾರೆ ಸಾಕಾನೆ ಶಿಬಿರಕ್ಕೆ ಕರೆತರಲಾಗಿತ್ತು. ಕಳೆದ ಜು.೨೧ರಂದು ಎಲ್ಲಾ ರೀತಿಯ ತರಬೇತಿ ನೀಡಿ ಕ್ರಾಲ್‌ನಿಂದ ಹೊರಗೆ ಬಿಡಲಾಗಿತ್ತು.

ಕಳೆದ ೧೦ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತಕ್ಷ ಆನೆಯ ಆರೋಗ್ಯದಲ್ಲಿ ಡಿ.೬ರಿಂದ ತೀವ್ರ ವ್ಯತ್ಯಾಸ ಕಂಡುಬಂದಿತ್ತು. ವೈದ್ಯಾಧಿಕಾರಿ ಡಾ. ಮುಜೀಬ್ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ ಕೊನೆಯುಸಿರೆಳೆದಿದೆ.

ಮಂಗಳವಾರ ಕೊಡಗು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಸೋನಲ್ ವಿಷ್ಟಿ ಉಪಸ್ಥಿತಿಯಲ್ಲಿ ಪಶು ವೈದ್ಯಾಧಿಕಾರಿಗಳಾದ ಡಾ. ಮುಜೀಬ್, ಡಾ. ಚಿಟ್ಟಿಯಪ್ಪ ಹಾಗೂ ಡಾ. ಸಂಜೀವ್ ಕುಮಾರ್ ಸಿಂಧೆ ಇವರಿಂದ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಆನೆಯ ಸ್ಯಾಂಪಲ್ಸ್‌ಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಮಡಿಕೇರಿ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ. ಅಭಿಷೇಕ್, ಸೋಮವಾರಪೇಟೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ಎ. ಗೋಪಾಲ್, ಕುಶಾಲನಗರ ವಲಯ ಅರಣ್ಯಾಧಿಕಾರಿ ಆರ್. ರಕ್ಷಿತ್, ದುಬಾರೆ ಕ್ಯಾಂಪಿನ ಉಪ ವಲಯ ಅರಣ್ಯಾಧಿಕಾರಿ ಕೆ.ಪಿ. ರಂಜನ್, ದುಬಾರೆ ಶಾಖಾ ಉಪ ವಲಯ ಅರಣ್ಯಾಧಿಕಾರಿ ವೆಂಕಟೇಶ್ ನಲವಾಡಿ ಹಾಗೂ ಸಿಬ್ಬಂದಿ ಈ ಸಂದರ್ಭದಲ್ಲಿ ಹಾಜರಿದ್ದರು.

 

 

 

ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

8 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

10 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

18 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

18 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

18 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

18 hours ago