ಕೊಡಗು

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ.

ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ ಆನೆಯು ಅನಾರೋಗ್ಯದಿಂದ ಸಾವನಪ್ಪಿದೆ. ತಕ್ಷ ಆನೆಯನ್ನು ೨೦೨೪ರ ಡಿ.೨೮ರಂದು ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಸೆರಹಿಡಿದು ದುಬಾರೆ ಸಾಕಾನೆ ಶಿಬಿರಕ್ಕೆ ಕರೆತರಲಾಗಿತ್ತು. ಕಳೆದ ಜು.೨೧ರಂದು ಎಲ್ಲಾ ರೀತಿಯ ತರಬೇತಿ ನೀಡಿ ಕ್ರಾಲ್‌ನಿಂದ ಹೊರಗೆ ಬಿಡಲಾಗಿತ್ತು.

ಕಳೆದ ೧೦ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತಕ್ಷ ಆನೆಯ ಆರೋಗ್ಯದಲ್ಲಿ ಡಿ.೬ರಿಂದ ತೀವ್ರ ವ್ಯತ್ಯಾಸ ಕಂಡುಬಂದಿತ್ತು. ವೈದ್ಯಾಧಿಕಾರಿ ಡಾ. ಮುಜೀಬ್ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ ಕೊನೆಯುಸಿರೆಳೆದಿದೆ.

ಮಂಗಳವಾರ ಕೊಡಗು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಸೋನಲ್ ವಿಷ್ಟಿ ಉಪಸ್ಥಿತಿಯಲ್ಲಿ ಪಶು ವೈದ್ಯಾಧಿಕಾರಿಗಳಾದ ಡಾ. ಮುಜೀಬ್, ಡಾ. ಚಿಟ್ಟಿಯಪ್ಪ ಹಾಗೂ ಡಾ. ಸಂಜೀವ್ ಕುಮಾರ್ ಸಿಂಧೆ ಇವರಿಂದ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಆನೆಯ ಸ್ಯಾಂಪಲ್ಸ್‌ಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಮಡಿಕೇರಿ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ. ಅಭಿಷೇಕ್, ಸೋಮವಾರಪೇಟೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ಎ. ಗೋಪಾಲ್, ಕುಶಾಲನಗರ ವಲಯ ಅರಣ್ಯಾಧಿಕಾರಿ ಆರ್. ರಕ್ಷಿತ್, ದುಬಾರೆ ಕ್ಯಾಂಪಿನ ಉಪ ವಲಯ ಅರಣ್ಯಾಧಿಕಾರಿ ಕೆ.ಪಿ. ರಂಜನ್, ದುಬಾರೆ ಶಾಖಾ ಉಪ ವಲಯ ಅರಣ್ಯಾಧಿಕಾರಿ ವೆಂಕಟೇಶ್ ನಲವಾಡಿ ಹಾಗೂ ಸಿಬ್ಬಂದಿ ಈ ಸಂದರ್ಭದಲ್ಲಿ ಹಾಜರಿದ್ದರು.

 

 

 

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

2 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

18 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

18 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

21 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

23 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

23 hours ago