ಕೊಡಗು

ಮಡಿಕೇರಿ| ಕಾಡಾನೆ ದಾಳಿ: ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ಸಾವು

ಮಡಿಕೇರಿ: ಕಾಡಾನೆ ದಾಳಿಗೆ ಗ್ರಾಮ ಪಂಚಾಯತ್‌ ಮಾಜಿ ಸದಸ್ಯೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ.

ತಾಲ್ಲೂಕಿನ ವಾಲ್ನೂರಿನಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ. ನಂಜರಾಯಪಟ್ಟಣ ಗ್ರಾಮ ಪಂಚಾಯತ್‌ ಮಾಜಿ ಸದಸ್ಯೆ ಜಲಜಾಕ್ಷಿ ಎಂಬುವವರೇ ಆನೆ ದಾಳಿಗೆ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ.

ನಡೆದುಕೊಂಡು ಹೋಗುತ್ತಿದ್ದ ಜಲಜಾಕ್ಷಿ ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಎಸಿಎಫ್‌ ಗೋಪಾಲ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ನಡೆಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಡಾನೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಈವರೆಗೂ ಇರಾನ್‌ನಿಂದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ: ಸಚಿವ ಜೈಶಂಕರ್‌

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್‌…

6 mins ago

ಮಾರ್ಚ್.‌11ರಿಂದ ವೈದ್ಯರ ಮುಷ್ಕರ ಫಿಕ್ಸ್:‌ ಸರ್ಕಾರಿ ಆಸ್ಪತ್ರೆಗಳ ಓಪಿಡಿ ಸೇವೆ ಬಂದ್‌

ಬೆಂಗಳೂರು: ರಾಜ್ಯದ ಸರ್ಕಾರಿ ವೈದ್ಯರು ತಮ್ಮ ದೀರ್ಘಕಾಲದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್.‌11ರಿಂದ ರಾಜ್ಯಾದ್ಯಂತ ಬೃಹತ್‌ ಪ್ರತಿಭಟನೆಗೆ ಕರೆ…

18 mins ago

ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಬೆಂಗಳೂರು: ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು…

33 mins ago

ಶಾಸಕ ಬಸವರಾಜ್‌ ಶಿವಗಂಗಾ ಪಿಎ ಆತ್ಮಹತ್ಯೆಗೆ ಶರಣು

ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್‌ ಶಿವಗಂಗಾ ಅವರ ಪಿಎ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರದ ಉಪ್ಪಾರಪೇಟೆ…

41 mins ago

ಕರೂರು ಕಾಲ್ತುಳಿತ ದುರಂತ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ನಟ ವಿಜಯ್‌ಗೆ ಮತ್ತೆ ಸಮನ್ಸ್‌

ಚೆನ್ನೈ: ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ವಿಜಯ್‌ ಅವರಿಗೆ ಸಿಬಿಐ ಮತ್ತೆ ಸಮನ್ಸ್‌ ನೀಡಿದೆ. ಕಳೆದ…

54 mins ago

ನಾಳೆ ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ವಿಧಾನಮಂಡಲ ಬಜೆಟ್‌ ಅಧಿವೇಶನದ ಹಿನ್ನೆಲೆಯಲ್ಲಿ ನಾಳೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ. ನಾಳೆ ಮಾರ್ಚ್.‌10ರಂದು ಸಂಜೆ ಬೆಂಗಳೂರಿನ…

2 hours ago