ಸುಂಟಿಕೊಪ್ಪ: ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ಅನೇಕ ಗ್ರಾಮಗಳಲ್ಲಿ ಒಂಟಿ ಸಲಗ ಭಾರೀ ದಾಂಧಲೆ ನಡೆಸಿದೆ.
ಎಮ್ಮೆಗುಂಡಿ ರಸ್ತೆಯ ಮೂಲಕ ಬಂದ ಕಾಡಾನೆಯು ಗ್ರಾಮಗಳಿಗೆ ನುಗ್ಗಿ ದಾಂಧಲೆ ನಡೆಸಿದೆ. ಸುಂಟಿಕೊಪ್ಪದ ಅಯ್ಯಪ್ಪ ದೇವಾಲಯದ ಮುಂಭಾಗಕ್ಕೆ ಬಂದು ಶಾಂತಗೀರಿ ತೋಟಕ್ಕೆ ಹೋಗಿದ್ದ ಆನೆ ಬಡಾವಣೆ ನಿವಾಸಿಗಳಲ್ಲಿ ಭೀತಿಯನ್ನು ಉಂಟು ಮಾಡಿದೆ.
ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದ ಕಾಡಾನೆಯು ಅನೇಕ ದ್ವಿಚಕ್ರ ವಾಹನಗಳು ಹಾಗೂ ಮನೆ ಮುಂದ ನಿಲ್ಲಿಸಿದ್ದ ಕಾರುಗಳ ಮೇಲೆ ಅಟ್ಯಾಕ್ ಮಾಡಿದೆ.
ಅದೃಷ್ಟವಶಾತ್ ಈ ವೇಳೆ ಜನರ ಓಡಾಟ ಕಡಿಮೆಯಾಗಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಕಾಡಾನೆ ದಾಳಿಯಿಂದ ರೋಸಿಹೋಗಿರುವ ನಿವಾಸಿಗಳು ಇದನ್ನು ತಡೆಗಟ್ಟಲು ಅರಣ್ಯ ಇಲಾಖೆ ಸಿಬ್ಬಂದಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನಾದರೂ ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ಕಾಡಾನೆಗಳು ನಾಡನತ್ತ ಬರದ ರೀತಿಯಲ್ಲಿ ಸೂಕ್ತ ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…