ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಗ್ರಾಮದ ಟೀ ಅಂಗಡಿ ಮೇಲೆ ಇಂದು ಬೆಳ್ಳಂಬೆಳಿಗ್ಗೆ ಕಾಡಾನೆಯೊಂದ ದಾಳಿ ನಡೆಸಿದ್ದು, ಕೂದಲೆಳೆ ಅಂತರದಲ್ಲಿ ದಂಪತಿ ಪಾರಾಗಿದ್ದಾರೆ.
ಇಂದು ಬೆಳಿಗ್ಗೆ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲ ತೋಟದಿಂದ ಮರಿಯೊಂದಿಗೆ ರಸ್ತೆ ದಾಟಿದ ಕಾಡಾನೆಯು ಪಕ್ಕದಲ್ಲಿದ್ದ ಟೀ ಅಂಗಡಿ ಮೇಲೆ ದಾಳಿ ನಡೆಸಿದೆ. ಅಂಗಡಿಯಲ್ಲಿದ್ದ ತಿಂಡಿ ಪದಾರ್ಥಗಳನ್ನು ಹಾಗೂ ಸಾಮಾಗ್ರಿಗಳನ್ನು ಎಳೆದು ಬಿಸಾಡಿದೆ. ಅಂಗಡಿಯಲ್ಲಿದ್ದ ಜಬ್ಬಾರ್ ಹಾಗೂ ಅವರ ಪತ್ನಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಕಾಡಾನೆ ದಾಳಿಯಿಂದ ಪಾರಾಗಲು ಯತ್ನಿಸಿದ ಮಾಲೀಕ ಜಬ್ಬಾರ್ಗೆ ಸಣ್ಣಪುಟ್ಟ ಗಾಯಗಳಾಗಿವೆ. ಪಕ್ಕದಲ್ಲಿರುವ ಸಾರ್ವಜನಿಕ ಬಸ್ ನಿಲ್ದಾಣದಲ್ಲಿದ್ದವರು ಕಿರುಚಾಡಿದಾಗ ಕಾಡಾನೆಯು ನಲ್ವತೇಕ್ರೆ ಮಾರ್ಗವಾಗಿ ದಾಟಿದೆ. ಇದೇ ರಸ್ತೆ ಮಾರ್ಗವಾಗಿ ಬರುತ್ತಿದ್ದ ಕಾರಿನ ಮೇಲೆಯೂ ಸಹ ದಾಳಿ ಮಾಡಲಾಗಿದೆ ಎನ್ನಲಾಗಿದೆ.
ಮಂಡ್ಯ: ಮಗಳ ಸಾವಿನಿಂದ ಮನನೊಂದ ತಾಯಿ ಡೆತ್ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಹೆಬ್ಬಕವಾಡಿ ಗ್ರಾಮದಲ್ಲಿ…
ಚಾಮರಾಜನಗರ : ಹಲವು ಕುಟುಂಬಗಳನ್ನೇ ಹಾಳು ಮಾಡಿ ಯುವ ಸಮೂಹವನ್ನು ಬೀದಿಗೆ ಬೀಳುವಂತೆ ಮಾಡುತ್ತಿರುವ ಆನ್ಲೈನ್ ಗೇಮ್ಗಳನ್ನು ನಿಷೇಧಿಸಬೇಕು ಎಂದು…
ಹುಣಸೂರು: ಇಲ್ಲಿನ ಬನ್ನಿಕುಪ್ಪೆ ಗ್ರಾಮದ ಮಾರಿಗುಡಿ ಆವರಣದಲ್ಲಿ ಅಸ್ಪೃಶ್ಯತಾ ನಿವಾರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಅಧಿಕಾರಿ ಅಶೋಕ್…
ಮೈಸೂರು: ಗ್ಯಾರಂಟಿ ಯೋಜನೆಗಳು ಯಾವುದೇ ಧರ್ಮ, ಜಾತಿ ಮತ್ತು ಪಕ್ಷಕ್ಕೆ ಸೀಮಿತವಾಗಿಲ್ಲ. ಗ್ಯಾರಂಟಿ ಯೋಜನೆಗಳಿಂದ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ.…
ಸಿದ್ದಾಪುರ : ವಿದ್ಯುತ್ ತಗುಲಿ ಕಾಡಾನೆ ಸಾವನಪ್ಪಿದ ಕಾರಣ ತೋಟದ ಕಾರ್ಮಿಕನನ್ನು ಅರಣ್ಯ ಇಲಾಖೆ ಬಂಧಿಸಿದ ಕ್ರಮದ ವಿರುದ್ದ ರೈತ,…
ಮಂಡ್ಯ: ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳನ್ನು ತಂಬಾಕು ಮುಕ್ತ ವಲಯವಾಗಿಸಿ ದೃಢೀಕರಣ ಪತ್ರ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ…